ಮೈಸೂರು: ಆಸ್ತಿ ರಕ್ಷಣೆ ಕೋರಿ ಚಾಮರಾಜನಗರ ಜಿಲ್ಲಾಡಳಿತಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಪತ್ರ ಬರೆದಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಮಹಾರಾಜರಿಗೆ ಸೇರಿರುವ ಆಸ್ತಿಗಳನ್ನು ಖಾತೆ ಮಾಡಿಕೊಡುವ ಹಾಗೂ ಖಾತೆಯಾಗುವ ತನಕ ಸದರಿ ಜಮೀನುಗಳಲ್ಲಿ ಯಾವುದೇ ರೀತಿಯ ಖಾತೆ, ಕಂದಾಯ ಗ್ರಾಮ ಇನ್ನಿತರೆ ವಹಿವಾಟುಗಳನ್ನು ನಡೆಸದಂತೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಮೈಸೂರು ಮಹಾರಾಜರು ಮತ್ತು ಭಾರತ ಸರ್ಕಾರದ ನಡುವೆ 1950ರ ಜನವರಿ.6ರಲ್ಲಿ ನಡೆದ ಒಪ್ಪಂದದ ಪ್ರಕಾರ ಚಾಮರಾಜನಗರ ಜಿಲ್ಲೆಯಲ್ಲಿನ ಸ್ವತ್ತುಗಳು ಮೈಸೂರು ಮಹಾರಾಜರ ಖಾಸಗಿ ಸ್ವತ್ತು ಎಂದು ಒಪ್ಪಂದವಾಗಿರುತ್ತದೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಂದ ಅರ್ಜಿ ಬಂದಿದೆ. ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಇದನ್ನು ಪರಿಶೀಲನೆ ಮಾಡಲು ತಹಶೀಲ್ದಾರ್ ಗಿರಿಜಾ ಅವರಿಗೆ ಸೂಚನೆ ನೀಡಿದ್ದಾರೆ ಎಂದು ಉಪವಿಭಾಗಾಧಿಕಾರಿ ತಿಳಿಸಿದ್ದಾರೆ.
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…
ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…