ಮೈಸೂರು ನಗರ

ಡಿಕೆಶಿಯನ್ನು ಹದ್ದು ಬಸ್ತಿನಲ್ಲಿನಲ್ಲಿಡೋಕೆ ತಂತ್ರ ಮಾಡಿದ್ದೆ ಸಿಎಂ ಸಾಧನೆ: ಪ್ರತಾಪ್‌ ಸಿಂಹ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಹದ್ದುಬಸ್ತಿನಲ್ಲಿಡೋಕೆ ತಂತ್ರ ಮಾಡಿದ್ದೇ ಸಿಎಂ ಸಿದ್ದರಾಮಯ್ಯ ಸಾಧನೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಜುಲೈ.19ರಂದು ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ ನಡೆಯಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂಗೆ ಹ್ಯಾಟ್ಸ್ ಆಫ್‌. ಎರಡು ಕಾಲು ವರ್ಷದಿಂದ ಏನೇನೂ ಸಾಧನೆ ಮಾಡದೇ ಸಾಧನಾ ಸಮಾವೇಶ ಮಾಡುತ್ತಿರುವ ಇವರ ಭಂಡತನಕ್ಕೆ ಹ್ಯಾಟ್ಸ್ ಆಫ್ ಎಂದು ವ್ಯಂಗ್ಯವಾಡಿದರು.

ಇನ್ನು ಮೈಸೂರಿಗೆ ಸಿಎಂ ಏನು ಕೊಟ್ಟಿದ್ದಾರೆ? ಏನ್ ಸಾಧನೆ ಹೇಳಿ? ಎರಡು ಕಾಲು ವರ್ಷದಲ್ಲಿ ನಿಮ್ಮ ಕೆಲಸ ಏನೂ ಹೇಳಿ ಸಿಎಂ? ಮದುವೆ ಹಾಗೂ ಮುಂಜಿಗೆಂದು ಮೈಸೂರಿಗೆ ಬಂದಿದ್ದೆ ಸಿಎಂ ಸಾಧನೆನಾ? ಏಳು ಕಾಲು ವರ್ಷ ಸಿಎಂ ಆದರು ಮೈಸೂರಿಗೆ ಒಂದು ಸರಿಯಾದ ದಿಕ್ಕು ತೋರಿಸಿಲ್ಲ ನೀವು. ಫಿಲಂ ಸಿಟಿ ಮಾಡಿದ್ರಾ? ಪ್ರವಾಸೋದ್ಯಮ ಸರ್ಕ್ಯೂಟ್ ಆಯ್ತಾ? ಎಲ್ಲದರ ದರ ಜಾಸ್ತಿ ಮಾಡಿದ್ದೆ ನಿಮ್ಮ ಸಾಧನೆ. ಯಾವ ಕೆಲಸವೂ ಮಾಡಿಲ್ಲ. ಬರೀ ಉಡಾಫೆ ಮಾತನಾಡುತ್ತಾ? ಡಿ.ಕೆ.ಶಿವಕುಮಾರ್ ಅವರನ್ನು ಹದ್ದು ಬಸ್ತಿನಲ್ಲಿ ಇಡೋಕೆ ತಂತ್ರ ಮಾಡಿದ್ದೆ ನಿಮ್ಮ ಸಾಧನೆ. ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಹೋರಾಟ ಮಾಡುತ್ತಾ, ರಾಜಣ್ಣ, ಜಾರಕಿಹೊಳಿ, ಶಾಮನೂರು ಅವರನ್ನು ಡಿ.ಕೆ.ಶಿವಕುಮಾರ್ ವಿರುದ್ಧ ಎತ್ತಿ ಕಟ್ಟಿದ್ದೆ ಸಿಎಂ ಸಾಧನೆ. ಡಿ.ಕೆ.ಶಿವಕುಮಾರ್‌ಗೆ ನ್ಯಾಯಯುತವಾಗಿ ಸಲ್ಲಬೇಕಾದ ಕುರ್ಚಿ ಬಿಟ್ಟು ಕೊಡದೆ ಇರುವುದೆ ನಿಮ್ಮ ಸಾಧನೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಸಿಲಬಸ್ ಬಿಟ್ಟು ಬರೀ ಔಟ್ ಆಫ್ ಸಿಲಬಸ್ ಮಾತಾಡುತ್ತಾರೆ. ತಮ್ಮ ಖಾತೆ ಬಗ್ಗೆ ಒಂದು ಸುದ್ದಿಗೋಷ್ಠಿ ಮಾಡಿ ಎಂದು ಕೇಳಿದರೆ ಬೇರೆ ಏನೇನೋ ಮಾತಾಡುತ್ತಾರೆ. ಪ್ರಿಯಾಂಕ ಖರ್ಗೆ, ವಿಶ್ವವಿಖ್ಯಾತ ಆರ್ಥಿಕ ತಜ್ಞ ಹಾಗೂ ಮೈನಿಂಗ್ ದೊರೆ ಸಂತೋಷ್ ಲಾಡ್‌ಗೆ ಮುಂದಿನ ವಾರ ಬಡ್ಡಿ ಸಮೇತ ಎಲ್ಲವನ್ನೂ ಚುಕ್ತಾ ಮಾಡ್ತಿನಿ. ಪ್ರಿಯಾಂಕಾ ಖರ್ಗೆ ಹಾಗೂ ಸಂತೋಷ ಲಾಡ್‌ನನ್ನು ಮುಂದಿನವಾರ ಎಕ್ಸ್ ಫೋಸ್ ಮಾಡ್ತಿನಿ ಎಂದು ಲೇವಡಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

1 min ago

ಮಲೆ ಮಹದೇಶ್ವರ ಬೆಟ್ಟ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ  ಮಹೋತ್ಸವದ ಅಂಗವಾಗಿ…

8 mins ago

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

3 hours ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

3 hours ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

4 hours ago

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

4 hours ago