ಮೈಸೂರು ನಗರ

ಡಿಕೆಶಿಯನ್ನು ಹದ್ದು ಬಸ್ತಿನಲ್ಲಿನಲ್ಲಿಡೋಕೆ ತಂತ್ರ ಮಾಡಿದ್ದೆ ಸಿಎಂ ಸಾಧನೆ: ಪ್ರತಾಪ್‌ ಸಿಂಹ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಹದ್ದುಬಸ್ತಿನಲ್ಲಿಡೋಕೆ ತಂತ್ರ ಮಾಡಿದ್ದೇ ಸಿಎಂ ಸಿದ್ದರಾಮಯ್ಯ ಸಾಧನೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಜುಲೈ.19ರಂದು ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ ನಡೆಯಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂಗೆ ಹ್ಯಾಟ್ಸ್ ಆಫ್‌. ಎರಡು ಕಾಲು ವರ್ಷದಿಂದ ಏನೇನೂ ಸಾಧನೆ ಮಾಡದೇ ಸಾಧನಾ ಸಮಾವೇಶ ಮಾಡುತ್ತಿರುವ ಇವರ ಭಂಡತನಕ್ಕೆ ಹ್ಯಾಟ್ಸ್ ಆಫ್ ಎಂದು ವ್ಯಂಗ್ಯವಾಡಿದರು.

ಇನ್ನು ಮೈಸೂರಿಗೆ ಸಿಎಂ ಏನು ಕೊಟ್ಟಿದ್ದಾರೆ? ಏನ್ ಸಾಧನೆ ಹೇಳಿ? ಎರಡು ಕಾಲು ವರ್ಷದಲ್ಲಿ ನಿಮ್ಮ ಕೆಲಸ ಏನೂ ಹೇಳಿ ಸಿಎಂ? ಮದುವೆ ಹಾಗೂ ಮುಂಜಿಗೆಂದು ಮೈಸೂರಿಗೆ ಬಂದಿದ್ದೆ ಸಿಎಂ ಸಾಧನೆನಾ? ಏಳು ಕಾಲು ವರ್ಷ ಸಿಎಂ ಆದರು ಮೈಸೂರಿಗೆ ಒಂದು ಸರಿಯಾದ ದಿಕ್ಕು ತೋರಿಸಿಲ್ಲ ನೀವು. ಫಿಲಂ ಸಿಟಿ ಮಾಡಿದ್ರಾ? ಪ್ರವಾಸೋದ್ಯಮ ಸರ್ಕ್ಯೂಟ್ ಆಯ್ತಾ? ಎಲ್ಲದರ ದರ ಜಾಸ್ತಿ ಮಾಡಿದ್ದೆ ನಿಮ್ಮ ಸಾಧನೆ. ಯಾವ ಕೆಲಸವೂ ಮಾಡಿಲ್ಲ. ಬರೀ ಉಡಾಫೆ ಮಾತನಾಡುತ್ತಾ? ಡಿ.ಕೆ.ಶಿವಕುಮಾರ್ ಅವರನ್ನು ಹದ್ದು ಬಸ್ತಿನಲ್ಲಿ ಇಡೋಕೆ ತಂತ್ರ ಮಾಡಿದ್ದೆ ನಿಮ್ಮ ಸಾಧನೆ. ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಹೋರಾಟ ಮಾಡುತ್ತಾ, ರಾಜಣ್ಣ, ಜಾರಕಿಹೊಳಿ, ಶಾಮನೂರು ಅವರನ್ನು ಡಿ.ಕೆ.ಶಿವಕುಮಾರ್ ವಿರುದ್ಧ ಎತ್ತಿ ಕಟ್ಟಿದ್ದೆ ಸಿಎಂ ಸಾಧನೆ. ಡಿ.ಕೆ.ಶಿವಕುಮಾರ್‌ಗೆ ನ್ಯಾಯಯುತವಾಗಿ ಸಲ್ಲಬೇಕಾದ ಕುರ್ಚಿ ಬಿಟ್ಟು ಕೊಡದೆ ಇರುವುದೆ ನಿಮ್ಮ ಸಾಧನೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಸಿಲಬಸ್ ಬಿಟ್ಟು ಬರೀ ಔಟ್ ಆಫ್ ಸಿಲಬಸ್ ಮಾತಾಡುತ್ತಾರೆ. ತಮ್ಮ ಖಾತೆ ಬಗ್ಗೆ ಒಂದು ಸುದ್ದಿಗೋಷ್ಠಿ ಮಾಡಿ ಎಂದು ಕೇಳಿದರೆ ಬೇರೆ ಏನೇನೋ ಮಾತಾಡುತ್ತಾರೆ. ಪ್ರಿಯಾಂಕ ಖರ್ಗೆ, ವಿಶ್ವವಿಖ್ಯಾತ ಆರ್ಥಿಕ ತಜ್ಞ ಹಾಗೂ ಮೈನಿಂಗ್ ದೊರೆ ಸಂತೋಷ್ ಲಾಡ್‌ಗೆ ಮುಂದಿನ ವಾರ ಬಡ್ಡಿ ಸಮೇತ ಎಲ್ಲವನ್ನೂ ಚುಕ್ತಾ ಮಾಡ್ತಿನಿ. ಪ್ರಿಯಾಂಕಾ ಖರ್ಗೆ ಹಾಗೂ ಸಂತೋಷ ಲಾಡ್‌ನನ್ನು ಮುಂದಿನವಾರ ಎಕ್ಸ್ ಫೋಸ್ ಮಾಡ್ತಿನಿ ಎಂದು ಲೇವಡಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

47 mins ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

17 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

18 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

19 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

1 day ago