ಮೈಸೂರು ನಗರ

ಸಚಿವ ಮಹದೇವಪ್ಪಗೆ ಶಿಷ್ಟಾಚಾರದ ಬಗ್ಗೆ ಮಾತಾಡುವ ಕನಿಷ್ಟ ಸೌಜನ್ಯವೂ ಇಲ್ಲ: ಪ್ರತಾಪ್‌ ಸಿಂಹ

ಮೈಸೂರು: ಬಿ.ಎಸ್.ಯಡಿಯೂರಪ್ಪ ಅವರ ಸತತ ಪ್ರಯತ್ನ ಹಾಗೂ ಸಂಸದ ರಾಘವೇಂದ್ರ ಅವರ ಪರಿಶ್ರಮದಿಂದ ಸಿಗಂದೂರು ಸೇತುವೆ ಆಗಿದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಸಿಗಂದೂರು ಸೇತುವೆ ಉದ್ಘಾಟನೆ ಕುರಿತು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ಜಟಾಪಟಿ ಮುಂದುವರಿದಿರುವ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿಷ್ಟಾಚಾರ ಅಂದರೆ ಏನೂ ಸಿಎಂ? ಎಂದು ಪ್ರಶ್ನೆ ಮಾಡಿದರು. ಕೇಂದ್ರವೂ ಸಿಎಂರನ್ನು ಕರೆದಿದೆ, ಸಂಸದ ರಾಘವೇಂದ್ರ ಅವರು ಸಿಎಂರನ್ನು ಕರೆದಿದ್ದಾರೆ. ಬೇರೆ ಇನ್ನು ಯಾವ ರೀತಿ ನಿಮ್ಮನ್ನು ಕರೆಯಬೇಕಿತ್ತು ಸಿಎಂ? ಬೆಂಗಳೂರಿನಿಂದ ಮೈಸೂರಿಗೆ ಬರಲು, ಮೈಸೂರಿನಿಂದ ತಾಲ್ಲೂಕು ಕೇಂದ್ರಕ್ಕೆ ಹೋಗಲು ಹೆಲಿಕಾಪ್ಟರ್ ಬಳಕೆ ಮಾಡುತ್ತಿರಿ. ಇಂಡಿಗೆ ಹೋಗಿ ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಹೋಗಬಹುದಿತ್ತಲ್ಲ ಎಂದು ಪ್ರಶ್ನೆ ಮಾಡಿದರು.

ಇನ್ನು ಬಿ.ಎಸ್.ಯಡಿಯೂರಪ್ಪ ಅವರ ಸತತ ಪ್ರಯತ್ನ, ಸಂಸದ ರಾಘವೇಂದ್ರ ಅವರ ಪರಿಶ್ರಮದಿಂದ ಸೇತುವೆ ಆಗಿದೆ. ಜನರ ಖುಷಿ ನೋಡಲು ಸಿಎಂ ಅಲ್ಲಿಗೆ ಹೋಗಬೇಕಿತ್ತು. ಬೀಗರ ಊಟಕ್ಕೆ ಬರ್ತಿರಲ್ಲ, ಸೇತುವೆ ಉದ್ಘಾಟನೆಗೆ ಯಾಕೆ ಹೋಗಲಿಲ್ಲ? ಸಿಎಂ‌ ಅವರೇ ನೀವು ಯಾವ ಶಿಷ್ಟಾಚಾರ ಪಾಲಿಸುತ್ತಿದ್ದಿರಿ? ಸಚಿವ ಮಹದೇವಪ್ಪಗೆ ಶಿಷ್ಟಾಚಾರದ ಬಗ್ಗೆ ಮಾತಾಡುವ ಕನಿಷ್ಟ ಸೌಜನ್ಯವೂ ಇಲ್ಲ ಎಂದರು.

ಆಷಾಢ ಶುಕ್ರವಾರಕ್ಕೆ ಬೆಟ್ಟಕ್ಕೆ ಬಂದ ಸಚಿವ ಮಹದೇವಪ್ಪ ಮಂಗಳಾರತಿ ಕೊಟ್ಟರೆ ಮಂಗಳರಾತಿ ತೆಗೆದುಕೊಳ್ಳುವುದಿಲ್ಲ. ನಂಬಿಕೆ ಇಲ್ಲ ಅಂದರೆ ನೀವು ಯಾಕೆ ದೇವಸ್ಥಾನಕ್ಕೆ ಬರ್ತಿರಾ? ಶಾಸಕ ತನ್ವೀರ್ ಸೇಠ್ ಬೆಟ್ಟಕ್ಕೆ ಬಂದರೆ ಪೂಜೆ ಮಾಡುತ್ತಾರೆ, ಕುಂಕುಮ ಹಚ್ಚುತ್ತಾರೆ. ನೀವು ಮಾತ್ರ ಹಂಗೆ ಹೋಗ್ತಿರಿ? ಈ ಸಂಪತ್ತಿಗೆ ಬೆಟ್ಟಕ್ಕೆ ಯಾಕೆ ಬರ್ತಿರಿ?
ಸಿಗಂಧೂರು ಸೇತುವೆ ಡಿಪಿಆರ್ ಮಾಡಿಸಿದ್ದು ನಾನೇ ಎಂದು ಮಹದೇವಪ್ಪ ಹೇಳಿದ್ದಾರೆ.

ಯಾರೋ ಗೊತ್ತಿಲ್ಲದವರಿಗೆ ಈ ಕಥೆ ಹೇಳಿ ಮಹದೇವಪ್ಪ ಅವರೇ. ಡಿಪಿಆರ್ ಕೂಡ ಮಾಡಿಸೋದು ಕೇಂದ್ರ ಸರ್ಕಾರ ಅನ್ನೋದು ಎಲ್ಲರಿಗೂ ಗೊತ್ತಿದೆ. ಸಿದ್ದರಾಮಯ್ಯ ಮೈಸೂರಿಗೆ ಬಂದಾಗ ಮಹದೇವಪ್ಪ ಮೈಸೂರಿಗೆ ಬರುತ್ತಾರೆ. ಅಮೇಲೆ ಕೈಗೆ ಸಿಗಲ್ಲ. ಮೈಸೂರಿನಲ್ಲಿ ಎಷ್ಟು ಕೆಡಿಪಿ ಸಭೆ ಮಾಡಿದ್ದಿರಾ ಹೇಳಿ? ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ಅವರಿಗೆ ಪೊಲೀಸ್ ಗೌರವ ಕೊಡುವ ಸೌಜನ್ಯವೂ ಸಿಎಂಗೆ ಹಾಗೂ ಮಹದೇವಪ್ಪ ಇಲ್ಲ. ಕೆ.ಬಿ.ಗಣಪತಿಗೆ ಪೊಲೀಸ್ ಗೌರವ ಯಾಕೆ ಕೊಡಲಿಲ್ಲ? 50 ವರ್ಷ ನಿರಂತರವಾಗಿ ಪತ್ರಿಕೋದ್ಯಮ ಮಾಡಿದ ಕೆ.ಬಿ.ಗಣಪತಿ ಅವರಿಗೆ ಪೊಲೀಸ್ ಗೌರವ ಕೊಡಬೇಕಿತ್ತು ತಾನೇ? ಹಿರಿಯ ಪತ್ರಕರ್ತರಾದ ರಾಜಶೇಖರ ಕೋಟಿ, ದಲಿತ ಹೋರಾಟದ ಮುಖಂಡ ನಿಧನರಾದಾಗ ಪೊಲೀಸ್ ಗೌರವ ಕೊಡಲಾಗಿತ್ತು. ಈಗ ಕೆ.ಬಿ.ಗಣಪತಿ ಅವರಿಗೆ ಯಾಕೆ ಕೊಡಲಿಲ್ಲ ಎಂದು ಮಹದೇವಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

1 hour ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

1 hour ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

2 hours ago

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

2 hours ago

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

2 hours ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

3 hours ago