ಮೈಸೂರು ನಗರ

ಉತ್ತರ ಭಾರತೀಯರು ಗತಿಯಿಲ್ಲದೇ ಕರ್ನಾಟಕಕ್ಕೆ ಬರುತ್ತಾರೆ: ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ಬೆಂಗಳೂರಿನಲ್ಲಿ ಟೆಕ್ಕಿ ಮೇಲೆ ಹಲ್ಲೆ ನಡೆಸಿದ್ದ ವಿಂಗ್ ಕಮಾಂಡರ್ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಉತ್ತರ ಭಾರತೀಯರ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗತಿ ಇಲ್ಲದೆ ಜೀವನ ನಡೆಸೋದಕ್ಕೆ ಇಲ್ಲಿಗೆ ಬರುವ ನೀವೂ ಕನ್ನಡ ಕಲಿಯಲ್ಲ ಅಂದ್ರೆ ಹೇಗೆ ಎಂದು ಪ್ರಶ್ನಿಸಿದರು.

‘ಆಕಸ್ಮಿಕ ಅಪಘಾತಕ್ಕೆ ಬೇರೆಯದೆ ಬಣ್ಣ ಕಟ್ಟಿದ್ದಾರೆ. ಇದನ್ನೆ ಸತ್ಯ ಎಂದು ನಂಬಿ ರಾಷ್ಟ್ರೀಯ ಮಾಧ್ಯಮಗಳು ಇದನ್ನು ವೈಭವೀಕರಿಸುವ ಕೆಲಸ ಮಾಡಿದರು. ಈ ಪ್ರಕರಣದಲ್ಲಿ ಕನ್ನಡಿಗರನ್ನು ನಕಾರಾತ್ಮಕವಾಗಿ ಚಿತ್ರಿಸುವ ಕೆಲಸ ಆಗುತ್ತಿದೆ. ಕನ್ನಡಿಗರು ಯಾರ ಮೇಲೂ ದಬ್ಬಾಳಿಕೆ ಮಾಡುವ ಜನ ಅಲ್ಲ. ಕನ್ನಡ ಮಾತಾಡಿ ಎಂದು ಹೇಳಿದ್ದರು ಅದರಲ್ಲಿ ತಪ್ಪೇನಿದೆ.? ಎಂದು ಪ್ರಶ್ನೆ ಮಾಡಿದರು.

ಇನ್ನು ಉತ್ತರ ಭಾರತದಲ್ಲಿ ಒಳ್ಳೆಯ ಇಂಜಿನಿಯರಿಂಗ್ ಕಾಲೇಜು ಇಲ್ಲ, ಮೆಡಿಕಲ್ ಕಾಲೇಜೂ ಇಲ್ಲ. ಹೀಗಾಗಿ ಗತಿ ಇಲ್ಲದೆ ಕರ್ನಾಟಕಕ್ಕೆ ಬರುತ್ತಾರೆ. ಇಲ್ಲೇ ವಾಸವಿದ್ದ ಮೇಲೆ ಕನ್ನಡ ಕಲಿಯೋದು ನಿಮ್ಮ ಕರ್ತವ್ಯ. ಹತ್ತಾರು ವರ್ಷಗಳಿಂದ ಇದ್ದ ಮೇಲೆ ಕನ್ನಡ ಕಲಿಯಬೇಕು ಅಲ್ವಾ? ನೀವು ಇಲ್ಲೆ ಇರಿ ಎಂದು ನಾವೇನೂ ನಿಮ್ಮ ಕೈ ಕಾಲು ಕಟ್ಟಿಲ್ಲ. ಉತ್ತರ ಭಾರತದಲ್ಲಿ ಒಳ್ಳೆಯ ಕಂಪನಿ ಇಲ್ಲ ಎಂದು ಕರ್ನಾಟಕಕ್ಕೆ ಬಂದಿದ್ದಿರಿ. ನಾವೇನೂ ನಿಮ್ಮನ್ನು ಕರೆದಿಲ್ಲ ಅದು ನೆನಪಿರಲಿ ಎಂದು ಕಿಡಿಕಾರಿದರು.

ಮುಂದುವರಿದು ಮಾತನಾಡಿದ ಅವರು, ನಿಮಗೆ ಇಲ್ಲಿ ಜೀವನ ಬೇಕು, ಆದರೆ ನಮ್ಮ ಭಾಷೆ ಬೇಡ ಅಂದರೆ ಹೇಗೆ. ಇಲ್ಲಿಯ ಭಾಷೆ ಬೇಡ ಅಂದ ಮೇಲೆ ನಿಮ್ಮ ಊರಲ್ಲೆ ಇರಿ. ಭಾಷೆ ಬಗ್ಗೆ ತಾತ್ಸಾರ ಮಾಡಕೂಡದು. ಉತ್ತರ ಭಾರತೀಯರು ಈ ರೀತಿ ಮನೋಭಾವವನ್ನು ಮೊದಲೇ ಬಿಡಬೇಕು ಎಂದರು.

ಇನ್ನು ಹಲ್ಲೆ ಮಾಡಿರುವ ವಿಂಗ್​ ಕಮಾಂಡರ್​ನನ್ನು ಕೂಡಲೇ ಬಂಧಿಸಬೇಕು. ಆತನಿಂದ ಕನ್ನಡಿಗರ ಬಳಿ ಕ್ಷಮೆ ಕೇಳಿಸಬೇಕು. ಹಲ್ಲೆ ನಡೆಸಿದ ಅಧಿಕಾರಿಯನ್ನು ಕೆಲಸದಿಂದ ವಜಾ ಮಾಡಬೇಕು. ಉತ್ತರ ಭಾರತೀಯರು ಯಾಕೆ ಚೆನ್ನೈನಲ್ಲಿ ಬಾಲ ಬಿಚ್ಚಲ್ಲ. ಉತ್ತರ ಭಾರತೀಯರು, ಮಲೆಯಾಳಿಗಳು ಅವರ ಊರಿನಲ್ಲಿ ಗತಿ ಇಲ್ಲದೆ ಇಲ್ಲಿಗೆ ಬಂದಿದ್ದಾರೆ. ತಿನ್ನೋಕು ಅವರಿಗೆ ಅವರ ಊರಿನಲ್ಲಿ ಗತಿ ಇಲ್ಲ. ಅದು ನೆನಪಿರಲಿ. ಒಂದು ವೇಳೆ ಕನ್ನಡಿಗರು ತಿರುಗಿ ನಿಂತರೆ ಯಾವ ಅನ್ಯ ಭಾಷಿಕರಿಗೂ ಇಲ್ಲಿ ಉಳಿಗಾಲ ಇರಲ್ಲ. ಅತಿಯಾಗಿ ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ. 1992ರಲ್ಲಿ ಕನ್ನಡಿಗರು ತಮಿಳರ ಮೇಲೆ ತಿರುಗಿಬಿದ್ದಾಗ ಏನಾಯ್ತು ನೆನಪು ಮಾಡಿಕೊಳ್ಳಿ. ಸ್ವಲ್ಪ ಹುಷಾರಾಗಿರಿ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago