ಮೈಸೂರು ನಗರ

ಇಷ್ಟು ದಿನ‌ ಹಿಂದೂ ವಿರೋಧಿಯಾಗಿದ್ದ ಸಿ‌ಎಂ, ಈಗ ಪೊಲೀಸ್ ಇಲಾಖೆ ವಿರೋಧಿ: ಪ್ರತಾಪ್‌ ಸಿಂಹ

ಮೈಸೂರು: ಇಷ್ಟು ದಿನ ಹಿಂದೂ ವಿರೋಧಿಯಾಗಿದ್ದ ಸಿಎಂ ಸಿದ್ದರಾಮಯ್ಯ ಈಗ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಿಂದುಳಿದವರ ಉದ್ಧಾರಕ ಎಂದು ಹೇಳುವ ಸಿಎಂ ಸಿದ್ದರಾಮಯ್ಯ ಅವರು, ವಾಲ್ಮೀಕಿ ಸಮುದಾಯದ ನಿಷ್ಠಾವಂತ ಅಧಿಕಾರಿ ದಯಾನಂದ್‌ರನ್ನು ಯಾಕೆ ಟಾರ್ಗೆಟ್ ಮಾಡಿದ್ದಾರೆ ಎಂದು ಪ್ರಶ್ನೆ ಮಾಡಿದರು. ದಯಾನಂದ್ ಒಬ್ಬ ಸಮರ್ಥ, ನಿಷ್ಠಾವಂತ ಅಧಿಕಾರಿ. ನಾಯಕ ಸಮುದಾಯದ ವ್ಯಕ್ತಿ ಮೇಲೆ ನಿಮಗೆ ಯಾಕೆ ಇಷ್ಟು ಕೋಪ. ಪೊಲೀಸ್ ಇಲಾಖೆ ಅನ್‌ಫಿಟ್ ಅಲ್ಲ ಸರ್ಕಾರ ಅನ್‌ಫಿಟ್. ಘಟನೆ ನಡೆದು ಒಂದು ವಾರವಾದರು ಸಿಎಂ ನೈತಿಕ ಹೊಣೆ ಹೊತ್ತಿಲ್ಲ.

ಸಿಎಂ ನಾಲ್ಕು ಹನಿ ಕಣ್ಣೀರು ಹಾಕಿಲ್ಲ. ಅನುಕಂಪ, ಪಶ್ಚಾತ್ತಾಪದ ಮಾತು ಬಂದಿಲ್ಲ. ಕಾಲ್ತುಳಿತದ ವಿಚಾರ ಎರಡು ಗಂಟೆ ತಡವಾಗಿ ಗೊತ್ತಾಯಿತು ಎನ್ನುವುದಾದರೆ ನೀವು ರಾಜ್ಯ ಹೇಗೆ ಸಂಭಾಳಿಸುತ್ತೀರಿ? ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ರನ್ನು ಯಾಕೆ ತೆಗೆದು ಹಾಕಿದ್ರಿ. ಮೊದಲು ಈ ರಹಸ್ಯ ಬಿಚ್ಚಿಡಿ. ಸಿಎಂ ತಮ್ಮ ಮೊಮ್ಮಗನಿಗೆ ಫೋಟೋಗ್ರಾಫ್, ಆಟೋಗ್ರಾಫ್ ಕೊಡಿಸಲು ಓಡುತ್ತಿದ್ದರೇನೋ. ಅದಕ್ಕೆ ಕಾಲ್ತುಳಿತ ವಿಚಾರ ಗೊತ್ತಾಗಿಲ್ಲ.

ಸತ್ಯವತಿ ಯಾಕೆ ಒತ್ತಡ ಹೇರಿ ಕಾರ್ಯಕ್ರಮ ಮಾಡಿಸಿದರು. ಯಾಕೆ ಅವರನ್ನು ಇನ್ನೂ ನೀವು ಸಸ್ಪೆಂಡ್ ಮಾಡಿಲ್ಲ. ಯಾಕೆ ಅವರನ್ನು ರಕ್ಷಣೆ ಮಾಡುತ್ತಿದ್ದಿರಿ? ಸತ್ಯವತಿ ಅವರು ಯಾಕೆ ಅಭಿಮಾನಿಗಳಿಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ ಎಂದು ಹೇಳಿದ್ರು? 11 ಜನರ ಸಾವಿಗೆ ಕಣ್ಣೀರು ಹಾಕಿ ಅವರ ಕುಟುಂಬಕ್ಕೆ ಹೋಗಿ ಸಾಂತ್ವನ ಹೇಳ ಬೇಕಾದ ಸಿಎಂ ಮದ್ವೆ, ಮುಂಜಿ ಎಂದು ಓಡಾಡುತ್ತಿದ್ದಾರೆ. ಸಿಎಂ ಅವರೇ ನಿಮಗೆ ಮದ್ವೆ ಊಟ, ಬೀಗರ ಊಟನೇ ಮುಖ್ಯನಾ? ವಿಧಾನಸೌಧಕ್ಕೆ ನೀವು ಸಿಎಂ‌ ಅನ್ನುವುದಾದರೆ ನೀವು ಒಬ್ಬ ಸಿಎಂ ಅಲ್ಲ. ಈ ರಾಜ್ಯವನ್ನು ಅಧಿಕಾರಿಗಳಿಗೆ ಬರೆದುಕೊಡಿ ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

17 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

17 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

17 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

17 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

17 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

20 hours ago