ಮೈಸೂರು ನಗರ

ಯುದ್ಧ | ಸಾಕ್ಷಿ ಕೇಳಿದ ಕಾಂಗ್ರೆಸ್‌ ವಿರುದ್ಧ ಪ್ರತಾಪ ಸಿಂಹ ಟೀಕೆ

ಮೈಸೂರು: ಪ್ರತಿ ಬಾರಿಯೂ ಯುದ್ಧ ನಡೆದ ಸಂದರ್ಭದಲ್ಲಿ ಪಾಕಿಸ್ತಾನಕ್ಕಿಂತಲೂ ಮೊದಲು ಸಾಕ್ಷಿ ಕೇಳುವುದು ಕಾಂಗ್ರೆಸ್ ನವರು. ಹಿಂದಿನ ಸಂದರ್ಭದಲ್ಲೂ ಅವರು ಅದೇ ಕೆಲಸ ಮಾಡಿದರು. ಪಾಕಿಸ್ತಾನದ ಪಿತಾಮಹ ಕಾಂಗ್ರೆಸ್ ಅಲ್ವಾ? ಹೀಗಾಗಿ ಅವರಿಗೆ ಎಲ್ಲದಕ್ಕೂ ಸಾಕ್ಷಿ ಬೇಕು ಎಂದು ಮಾಜಿ ಸಂಸದ ಪ್ರತಾಪ ಸಿಂಹ ಟೀಕಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅವರು ಆಪರೇಷನ್ ಸಿಂದೂರ ಕಾರ್ಯಾಚರಣೆಯನ್ನು ಟೀಕಿಸಿದ್ದಾರೆ. ಕೊತ್ತೂರು ಮಂಜುನಾಥ್ ಅವರಿಗೆ ಈ ದೇಶದ ಬಗ್ಗೆ ಏನು ಗೊತ್ತಿದೆ? ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೆ ಮಂಜುನಾಥ್ ಹೇಳ್ತಾರೆ‌. ಕೊತ್ತೂರು ಮಂಜುನಾಥ್ ಹೋಗಿ ಅವರ ನಾಯಕ ಶಶಿ ತರೂರು ಅವರಲ್ಲಿ ಕೇಳಲಿ, ಶಶಿ ತರೂರು ಅವರೇ ಸರಿಯಾಗಿ ಉತ್ತರ ಕೊಡ್ತಾರೆ. ಈ ರೀತಿ ಮಾತನಾಡುವುದು ಕಾಂಗ್ರೆಸ್ ನ ಮನಃಸ್ಥಿತಿ ಎಂದು ಖಂಡಿಸಿದರು.

ಬ್ರಹ್ಮೋಸ್ ಸಿದ್ಧವಾಗಿದ್ದು ಡಾ.ಮನಮೋಹನ ಸಿಂಗ್ ಅವರು ಪ್ರಧಾನಮಂತ್ರಿಗಳಾಗಿದ್ದ ಅಧಿಕಾರ ಅವಧಿಯಲ್ಲಿ ಎಂಬ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪ್ರತಾಪ ಸಿಂಹ, ಶಿಕ್ಷಣ ಸಚಿವರು ಯಾವ ಕಾಲೇಜಿನಲ್ಲಿ ಓದಿದ್ರು? ಅವರ ಶಿಕ್ಷಣ ಕಥೆ ಏನು ಅಂಥ ಎಲ್ಲರಿಗೂ ಗೊತ್ತಿದೆ ಬಿಡಿ. ಇದಕ್ಕಾಗಿಯೇ ಹೇಳುವುದು ಅಕ್ಷರಸ್ಥರು ರಾಜಕಾರಣಕ್ಕೆ ಬರಬೇಕು ಅಂಥ. ಅನಕ್ಷರಸ್ಥರು ಸಚಿವರಾದರೆ ಇಂತಹ ಹೇಳಿಕೆಗಳು ಬರುತ್ತವೆ ಎಂದರು.

ಯುದ್ಧದ ಕ್ರೆಡಿಟ್ ಸೈನಿಕರಿಗೆ ಸಲ್ಲಬೇಕೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಜನರ ತೆರಿಗೆ ದುಡ್ಡಲ್ಲಿ ಎರಡು ಸಾವಿರ ರೂಪಾಯಿ ಕೊಟ್ಟು ನಾನೇ ಕೊಟ್ಟೆ, ನಾನೇ ಕೊಟ್ಟೆ ಅಂಥ ಯಾಕೆ ಹೇಳ್ತೀರಾ?
ಇದರ ಕ್ರೆಡಿಟ್ ಅನ್ನು ತೆರಿಗೆದಾರರಿಗೆ ಯಾಕೆ ಕೊಡಲ್ಲ? ಸಿದ್ದರಾಮಯ್ಯನ ಹುಂಡಿಯಲ್ಲಿ ಚಿನ್ನದ ಅಲೂಗೆಡ್ಡೆ, ಚಿನ್ನದ ಕಬ್ಬು ಬೆಳೆದು ಅದರಲ್ಲಿ ಬಂದ ದುಡ್ಡನ್ನು ಜನಕ್ಕೆ ಕೊಡುತ್ತೀದ್ದೀರಾ? ಎಂದು ಪ್ರಶ್ನಿಸಿದರು.

ಯುದ್ಧ ಕ್ರೆಡಿಟ್ ಸೈನಿಕರಿಗೆ ಸಿಗಬೇಕು. ಆದರೆ ಜನ ಪ್ರಧಾನಮಂತ್ರಿ ನರೇಂದ್ರ ಮೋದಿ ಅಂತಹ ಗಟ್ಟಿನಾಯಕತ್ವಕ್ಕೆ ಇದರ ಕ್ರೆಡಿಟ್ ಕೊಡುತ್ತಿದ್ದಾರೆ ಅಷ್ಟೇ. ಹಿಂದೆ ಇಂದಿರಾಗಾಂಧಿ ಅವರಿಗೂ ಕ್ರೆಡಿಟ್ ಕೊಡಲಿಲ್ವಾ? ಎಂದು ಪ್ರತಾಪ ಸಿಂಹ ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

4 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

5 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

6 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

6 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

6 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

7 hours ago