ಮೈಸೂರು ನಗರ

ಯುದ್ಧ | ಸಾಕ್ಷಿ ಕೇಳಿದ ಕಾಂಗ್ರೆಸ್‌ ವಿರುದ್ಧ ಪ್ರತಾಪ ಸಿಂಹ ಟೀಕೆ

ಮೈಸೂರು: ಪ್ರತಿ ಬಾರಿಯೂ ಯುದ್ಧ ನಡೆದ ಸಂದರ್ಭದಲ್ಲಿ ಪಾಕಿಸ್ತಾನಕ್ಕಿಂತಲೂ ಮೊದಲು ಸಾಕ್ಷಿ ಕೇಳುವುದು ಕಾಂಗ್ರೆಸ್ ನವರು. ಹಿಂದಿನ ಸಂದರ್ಭದಲ್ಲೂ ಅವರು ಅದೇ ಕೆಲಸ ಮಾಡಿದರು. ಪಾಕಿಸ್ತಾನದ ಪಿತಾಮಹ ಕಾಂಗ್ರೆಸ್ ಅಲ್ವಾ? ಹೀಗಾಗಿ ಅವರಿಗೆ ಎಲ್ಲದಕ್ಕೂ ಸಾಕ್ಷಿ ಬೇಕು ಎಂದು ಮಾಜಿ ಸಂಸದ ಪ್ರತಾಪ ಸಿಂಹ ಟೀಕಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅವರು ಆಪರೇಷನ್ ಸಿಂದೂರ ಕಾರ್ಯಾಚರಣೆಯನ್ನು ಟೀಕಿಸಿದ್ದಾರೆ. ಕೊತ್ತೂರು ಮಂಜುನಾಥ್ ಅವರಿಗೆ ಈ ದೇಶದ ಬಗ್ಗೆ ಏನು ಗೊತ್ತಿದೆ? ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೆ ಮಂಜುನಾಥ್ ಹೇಳ್ತಾರೆ‌. ಕೊತ್ತೂರು ಮಂಜುನಾಥ್ ಹೋಗಿ ಅವರ ನಾಯಕ ಶಶಿ ತರೂರು ಅವರಲ್ಲಿ ಕೇಳಲಿ, ಶಶಿ ತರೂರು ಅವರೇ ಸರಿಯಾಗಿ ಉತ್ತರ ಕೊಡ್ತಾರೆ. ಈ ರೀತಿ ಮಾತನಾಡುವುದು ಕಾಂಗ್ರೆಸ್ ನ ಮನಃಸ್ಥಿತಿ ಎಂದು ಖಂಡಿಸಿದರು.

ಬ್ರಹ್ಮೋಸ್ ಸಿದ್ಧವಾಗಿದ್ದು ಡಾ.ಮನಮೋಹನ ಸಿಂಗ್ ಅವರು ಪ್ರಧಾನಮಂತ್ರಿಗಳಾಗಿದ್ದ ಅಧಿಕಾರ ಅವಧಿಯಲ್ಲಿ ಎಂಬ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪ್ರತಾಪ ಸಿಂಹ, ಶಿಕ್ಷಣ ಸಚಿವರು ಯಾವ ಕಾಲೇಜಿನಲ್ಲಿ ಓದಿದ್ರು? ಅವರ ಶಿಕ್ಷಣ ಕಥೆ ಏನು ಅಂಥ ಎಲ್ಲರಿಗೂ ಗೊತ್ತಿದೆ ಬಿಡಿ. ಇದಕ್ಕಾಗಿಯೇ ಹೇಳುವುದು ಅಕ್ಷರಸ್ಥರು ರಾಜಕಾರಣಕ್ಕೆ ಬರಬೇಕು ಅಂಥ. ಅನಕ್ಷರಸ್ಥರು ಸಚಿವರಾದರೆ ಇಂತಹ ಹೇಳಿಕೆಗಳು ಬರುತ್ತವೆ ಎಂದರು.

ಯುದ್ಧದ ಕ್ರೆಡಿಟ್ ಸೈನಿಕರಿಗೆ ಸಲ್ಲಬೇಕೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಜನರ ತೆರಿಗೆ ದುಡ್ಡಲ್ಲಿ ಎರಡು ಸಾವಿರ ರೂಪಾಯಿ ಕೊಟ್ಟು ನಾನೇ ಕೊಟ್ಟೆ, ನಾನೇ ಕೊಟ್ಟೆ ಅಂಥ ಯಾಕೆ ಹೇಳ್ತೀರಾ?
ಇದರ ಕ್ರೆಡಿಟ್ ಅನ್ನು ತೆರಿಗೆದಾರರಿಗೆ ಯಾಕೆ ಕೊಡಲ್ಲ? ಸಿದ್ದರಾಮಯ್ಯನ ಹುಂಡಿಯಲ್ಲಿ ಚಿನ್ನದ ಅಲೂಗೆಡ್ಡೆ, ಚಿನ್ನದ ಕಬ್ಬು ಬೆಳೆದು ಅದರಲ್ಲಿ ಬಂದ ದುಡ್ಡನ್ನು ಜನಕ್ಕೆ ಕೊಡುತ್ತೀದ್ದೀರಾ? ಎಂದು ಪ್ರಶ್ನಿಸಿದರು.

ಯುದ್ಧ ಕ್ರೆಡಿಟ್ ಸೈನಿಕರಿಗೆ ಸಿಗಬೇಕು. ಆದರೆ ಜನ ಪ್ರಧಾನಮಂತ್ರಿ ನರೇಂದ್ರ ಮೋದಿ ಅಂತಹ ಗಟ್ಟಿನಾಯಕತ್ವಕ್ಕೆ ಇದರ ಕ್ರೆಡಿಟ್ ಕೊಡುತ್ತಿದ್ದಾರೆ ಅಷ್ಟೇ. ಹಿಂದೆ ಇಂದಿರಾಗಾಂಧಿ ಅವರಿಗೂ ಕ್ರೆಡಿಟ್ ಕೊಡಲಿಲ್ವಾ? ಎಂದು ಪ್ರತಾಪ ಸಿಂಹ ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

2 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

3 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

3 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

3 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

4 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

4 hours ago