ಮೈಸೂರು ನಗರ

ಪಾಕಿಸ್ತಾನದ ರಾಷ್ಟ್ರಪಿತ ಇಂಡಿಯನ್ ನ್ಯಾಷನಲ್‌ ಕಾಂಗ್ರೆಸ್: ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ಪಾಕಿಸ್ತಾನದ ರಾಷ್ಟ್ರಪಿತ ಇಂಡಿಯನ್ ನ್ಯಾಷನಲ್‌ ಕಾಂಗ್ರೆಸ್ ಆಗಿದ್ದು, ಅವರ ಕೂಸಿನ ಮೇಲೆ ಹಲ್ಲೆ ಮಾಡಿದಾಗ ಅವರಿಗೆ ಹೊಟ್ಟೆ ಉರಿಯುತ್ತದೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಆಪರೇಷನ್‌ ಸಿಂಧೂರ ಚುಟುಪುಟು ದಾಳಿ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಚುಟುಪುಟು ದಾಳಿ ಮಾಡಿದ ನಂತರವೇ ಪಾಕಿಸ್ತಾನದ ಡಿಜಿಎಂ ನಮಗೆ ಕರೆ ಮಾಡಿದ್ದು. ಯುದ್ಧ ನಿಲ್ಲಿಸಿ ಎಂದು ಯಾಕೆ ಕೇಳುತ್ತಾ ಇದ್ದರು? ಎಂದು ಪ್ರಶ್ನೆ ಮಾಡಿದರು. ಪಾಕಿಸ್ತಾನದ ಪ್ರಧಾನಿ ಕೂಡ ದಾಳಿ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಕಳೆದ 2008ರ ಮುಂಬೈ ದಾಳಿ‌ ಬಳಿಕ ನೀವು ಏನು ಮಾಡಿದ್ರಿ. ಪ್ರಧಾನಿ ನರೇಂದ್ರ ಮೋದಿ ಮೇಲಿನ ದ್ವೇಷಕ್ಕೆ‌ ಸೇನೆ‌ ಮೇಲೆ ಈ ರೀತಿ ಮಾತನಾಡುವುದು ಸರಿನಾ? ಎಂದು ಕಿಡಿಕಾರಿದರು.

ಇದನ್ನೂ ಓದಿ:- ಬೆಂಗಳೂರು ಮಳೆ ಅವಾಂತರ : ಸಿಎಂ, ಡಿಸಿಎಂ ಸಿಟಿ ರೌಂಡ್ಸ್‌ 

ಇನ್ನು ಮೋದಿಯ ದ್ವೇಷಕ್ಕೆ ಕೆಲವು ಕಾಂಗ್ರೆಸ್ ನಾಯಕರು ಹೇಳಿಕೆ‌ ಕೊಡುತ್ತಿದ್ದಾರೆ. ಶಶಿ ತರೂರ್‌ ಸೇರಿದಂತೆ ಹಲವರು ದೇಶಕ್ಕೆ ಬೆಂಬಲ ನೀಡುತ್ತಿದ್ದಾರೆ. ಕಾಂಗ್ರೆಸ್‌ನವರು ಪಾಕಿಸ್ತಾನದ ಮೇಲಿನ ಪ್ರೀತಿಯಿಂದ ಈ ಥರ ಹೇಳಿಕೆ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

1 hour ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

1 hour ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

1 hour ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

2 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

2 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

2 hours ago