prathap simha
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡದಿದ್ದರೆ ಸಂತೋಷ್ ಲಾಡ್ಗೆ ತಿಂದಿದ್ದು ಕರಗಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಇಬ್ಬರು ಸಚಿವರು ದಿನ ಬೆಳಗಾದರೆ ಕಾಗೆ ಥರ ಕಾಕಾ ಎನ್ನುತ್ತಾರೆ. ಸಂತೋಷ್ ಲಾಡ್ ನೀವು ಏನು ಮಾತಾಡ್ತಿದ್ದಿರಿ ಅನ್ನೋ ಜ್ಞಾನ ನಿಮಗೆ ಇದ್ಯಾ? ಮೋದಿ ಬಗ್ಗೆ ಮಾತಾಡದೆ ಇದ್ದರೆ ಲಾಡ್ಗೆ ತಿಂದಿದ್ದು ಕರಗುವುದಿಲ್ಲ ಎಂದು ಕಿಡಿಕಾರಿದರು.
ಇನ್ನು ಮರಾಠ ಸಮುದಾಯದ ಸಂತೋಷ್ ಲಾಡ್ ಬಾಯಲ್ಲಿ ಶಿವಾಜಿ ರೀತಿ ಮಾತು ಬರುತ್ತಿಲ್ಲ. ಅಫ್ಜಲ್ ಖಾನ್ ರೀತಿ ಮಾತು ಬರುತ್ತಿದೆ. ಸಂತೋಷ್ ಲಾಡ್ ನೀವೇನು ಬಹಳ ಮೇಧಾವಿ ನಾ.? ಸಂತೋಷ್ ಲಾಡ್ ಒಬ್ಬ ತಿಳಿಗೇಡಿ. ನೇಹಾ ಹತ್ಯೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದರೆ ಮೋದಿ ಕೇಳ್ರಿ ಅಂತಾರೆ. ಹೀಗಾಗಿ ನೇಹಾ ಹತ್ಯೆ ಮಾಡಿದವನ ಎನ್ ಕೌಂಟರ್ಗೆ ಮೋದಿ ಅನುಮತಿ ಏಕೆ ಬೇಕು ಲಾಡ್? ಒಂದು ವರ್ಷವಾಯ್ತು ನೇಹಾಗೆ ನ್ಯಾಯ ಕೊಡಿಸಿದ್ರಾ? ಕಾರ್ಮಿಕ ಇಲಾಖೆಯ ಹೆಲ್ತ್ ಕಿಟ್ ಹಗರಣದ ಕಥೆ ಏನ್ ಆಯ್ತು? ಮೋದಿಗೆ ಹೇಳಿ ಕೊಡುವಷ್ಟು ನೀವು ಬುದ್ದಿವಂತರಾ? ಎಂದು ಪ್ರಶ್ನೆ ಮಾಡಿದರು.
ಇಂದಿರಾಗಾಂಧಿ ಏನು ಕಡಿದು ಕಟ್ಟೆ ಹಾಕಿದ್ರು: ಇನ್ನು ಮುಂದುವರಿದು ಮಾತನಾಡಿದ ಅವರು ಕಳೆದ 1971ರಲ್ಲಿ ಇಂದಿರಾಗಾಂಧಿ ಏನ್ ಕಡಿದು ಕಟ್ಟೆ ಹಾಕಿದ್ರು. ಅವತ್ತಿನ ಯುದ್ದದ ಗೆಲುವನ್ನು ಹಾಳು ಮಾಡಿದ್ದು ನಿಮ್ಮ ಇಂದಿರಾಗಾಂಧಿ ಅದು ನಿಮಗೆಲ್ಲಾ ನೆನಪಿರಲಿ. ಪಹಲ್ಗಾಮ್ನಿಂದ ಕನ್ನಡಿಗರನ್ನು ಕರೆದುಕೊಂಡು ಬರಲು ಅವಕಾಶ ಮಾಡಿ ಕೊಟ್ಟಿದ್ದು ಮೋದಿ. ಅದರಲ್ಲಿ ನಿಮ್ಮ ಸಾಧನೆ ಏನಿದೆ ಲಾಡ್? ನಿಮ್ಮ ಅನಿಷ್ಟಕ್ಕೆಲ್ಲ ಮೋದಿ ಕಾರಣ ಅನ್ನೋ ರೀತಿ ಯಾಕೆ ಮಾತಾಡ್ತಿರಿ? ಪಾಕಿಸ್ತಾನ ಮಾತ್ರ ಶತ್ರು ಅಲ್ಲ. ನಮ್ಮ ಜೊತೆಯಲ್ಲೇ ಇಂತಹ ಹಿತಶತ್ರುಗಳು ಟೈಂ ಬಾಂಬ್ ಥರ ಇದ್ದಾರೆ. ಸಂತೋಷ್ ಲಾಡ್ಗೆ ಮೈ ತುಂಬಾ ಮೈನಿಂಗ್ ದುಡ್ಡು ಅಂಟಿ ಕೊಂಡಿದೆ. ಹಣದ ಕೊಬ್ಬಿನಿಂದ ಈ ರೀತಿ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಮೂಡಾ ಹಗರಣಕ್ಕೆ ಸಿಲುಕಿದ ಕಾರಣ ಸಂತೋಷ್ ಲಾಡ್ ಕಾರ್ಮಿಕ ಕಿಟ್ ಹಗರಣದಿಂದ ಬಚಾವ್ ಆದ್ರು. ಇಲ್ಲದೆ ಇದ್ದಿದ್ದರೆ ಎರಡನೇ ಬಾರಿ ರಾಜೀನಾಮೆ ಕೊಡಬೇಕಿತ್ತು. ನಿಮ್ಮ ಹತ್ತಿರ ದುಡ್ಡು ಇರಬಹುದು ಆದರೆ ಪತ್ರಕರ್ತರಿಗೆ ನೈತಿಕತೆ ಇದೆ. ಇದನ್ನು ನೆನಪಿಟ್ಟು ಕೊಳ್ಳಿ ಲಾಡ್ ಎಂದು ಕಿಡಿಕಾರಿದರು.
ಇನ್ನು ಪಾಕಿಸ್ತಾನವೇ ತನ್ನ ಮೇಲೆ ದಾಳಿ ಆಗಿರುವುದಕ್ಕೆ ಸಾಕ್ಷಿ ಕೊಟ್ಟಿದೆ. ಆದರೂ ಭಾರತದಲ್ಲಿ ಕೆಲವರು ತಕರಾರು ಮಾಡುವುದನ್ನು ನಿಲ್ಲಿಸುತ್ತಿಲ್ಲ. ಕಾಂಗ್ರೆಸ್ಗೆ ಪಾಕಿಸ್ತಾನದ ಮೇಲೆ ಸದಾ ಪ್ರೀತಿ. ಕಾಂಗ್ರೆಸ್ ಪಾಕಿಸ್ತಾನದ ಪಿತಾಮಹ. ಅದಕ್ಕೆ ಪ್ರೀತಿ ಜಾಸ್ತಿ ಇರುತ್ತೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…