ಮೈಸೂರು ನಗರ

ಸಿದ್ದರಾಮಯ್ಯಗೆ ಪ್ರಧಾನಿ ಮೋದಿ ಸಾಧನೆ ಅಳೆಯುವ ಅರ್ಹತೆಯಿಲ್ಲ: ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ರಾಜ್ಯದ ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಪ್ರಧಾನಿ ನರೇಂದ್ರ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿಯಾಗಿ ನರೇಂದ್ರ ಮೋದಿ 11 ವರ್ಷ ಆಡಳಿತ ಪೂರೈಸಿದ್ದು, ಮೋದಿ ಆಡಳಿತ ಶೂನ್ಯ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಮಾತನಾಡಿದ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು, 2 ವರ್ಷದಿಂದ ರಾಜ್ಯದಲ್ಲಿ ಸಿಎಂ ಆಗಿದ್ದೀರಿ, ನಿಮ್ಮ ಸಾಧನೆ ಏನು? ರಾಜ್ಯದ ಜನರ ಮೇಲೆ ಸಾಲ ಏರಿರುವುದು ನಿಮ್ಮ ಸಾಧನೆ. ಕೊಲೆ ಸುಲಿಗೆ ಜಾಸ್ತಿಯಾಗಿದೆ. ಯುವನಿಧಿ ಕೊಡ್ತೀವಿ ಎಂದು ಯುವಕರಿಗೆ ಟೋಪಿ ಹಾಕಿದ್ದೀರಿ. ಅನ್ನಭಾಗ್ಯ, ಗೃಹಲಕ್ಷ್ಮೀ ಕೊಡ್ತೀವಿ ಎಂದು ಟೋಪಿ ಹಾಕಿದ್ರಿ, ಇದೇ ನಿಮ್ಮ ಸಾಧನೆನಾ.? ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಪ್ರಧಾನಿ ನರೇಂದ್ರ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ ಎಂದು ಸಿಎಂಗೆ ತಿರುಗೇಟು ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬೆಂಗಳೂರು-ಮೈಸೂರು ಹೈವೇ ಮಾಡಿದ್ದು ಮೋದಿ. ರಿಂಗ್ ರೋಡ್ ಎನ್‌ಎಚ್ ಮೇಲ್ದರ್ಜೆಗೆ ಏರಿಸಿದ್ದು ಮೋದಿ. ಮೈಸೂರು ಏರ್‌ಪೋರ್ಟ್‌ಗೆ ವಿಮಾನ ಬರಲು ಕಾರಣ ಮೋದಿ. ಪಾಸ್‌ಪೋರ್ಟ್ ಸೇವೆ ಕೇಂದ್ರಕ್ಕೆ ಕಾರಣ ಮೋದಿ. ಹಳೇ ಡಿಸಿ ಆಫೀಸ್ ಮ್ಯೂಸಿಯಂ ಮಾಡಲು ಹಣ ಕೊಟ್ಟಿರೋದು ಮೋದಿ. ಚಾಮುಂಡಿಬೆಟ್ಟದ ಅಭಿವೃದ್ಧಿಗೆ 45 ಕೋಟಿ ಹಣ ಕೊಟ್ಟಿದ್ದು ಮೋದಿ. ನೀವು ಮದುವೆ, ಮುಂಜಿ ಎಂದು ಓಡಾಡಿಕೊಂಡು ಇದ್ದೀರಲ್ಲ, ಆ ರೀತಿ ಪ್ರಧಾನಿ ಮೋದಿ ಮಾಡಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

16 mins ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

34 mins ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

40 mins ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

58 mins ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸ್ಫೋಟ: ಮಹಿಳೆಯರು ಸೇರಿ 15 ಕಾರ್ಮಿಕರು ದುರ್ಮರಣ

ನಾಗ್ಪುರ: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…

1 hour ago

ಯುವಜನತೆಯು ಡ್ರಗ್ಸ್ ಮತ್ತು ಮಾದಕ ವಸ್ತುಗಳಿಗೆ ಬಲಿಯಾಗದಿರಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು…

2 hours ago