ಮೈಸೂರು: ಪಟಾಕಿ ಸಿಡಿತದಿಂದ ಗಾಯಗೊಳ್ಳುವವರಿಗೆ ಚಿಕಿತ್ಸೆ ನೀಡಲು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ ಕುರಿತು ವೈದ್ಯರಾದ ಅಮಿತ್ ಹಾಗೂ ಸುರಭಿ ಅವರು ಮಾಹಿತಿ ನೀಡಿದ್ದು, ದೀಪಾವಳಿ ಹಬ್ಬದಂದು ಪಟಾಕಿ ಸಿಡಿತಗಳಿಂದ ಕಣ್ಣಿಗೆ ಹಾನಿಯಾಗಿ ಬರುವವರಿಗೆ ತುರ್ತು ಚಿಕಿತ್ಸೆ ಒದಗಿಸಲಾಗುತ್ತದೆ. ಕೆ.ಆರ್.ಆಸ್ಪತ್ರೆಯ ಕಣ್ಣಿನ ವಿಭಾಗದಲ್ಲಿ ದಿನದ 24 ಗಂಟೆಯೂ ಚಿಕಿತ್ಸೆ ಲಭ್ಯವಿರಲಿದೆ. ಕಣ್ಣಿನ ಹಾನಿಗೆ ಒಳಗಾದವರ ಚಿಕಿತ್ಸೆಗಾಗಿ ಪ್ರತ್ಯೇಕ ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಮಕ್ಕಳು ಪಟಾಕಿ ಸಿಡಿಸುವಾಗ ಎಚ್ಚರಿಕೆ ವಹಿಸಬೇಕು. ಪಟಾಕಿ ಸಿಡಿತದಿಂದ ಕಣ್ಣಿಗೆ ಹಾನಿಯಾದರೆ ಕೂಡಲೇ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಬೇಕು. ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆದರೆ ದೃಷ್ಟಿ ಕಳೆದುಕೊಳ್ಳುವುದನ್ನು ತಡೆಯಬಹುದು ಎಂದು ಜನತೆಗೆ ಸಲಹೆ ನೀಡಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…