ಮೈಸೂರು ನಗರ

ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ:‌ ಅಂದೋಲನ ಚಾಂಪಿಯನ್‌

ಮೈಸೂರು: ಪತ್ರಕರ್ತರ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿಯ ರೋಚಕ ಫೈನಲ್‌ನಲ್ಲಿ ‘ಆಂದೋಲನ’ ದಿನ ಪತ್ರಿಕೆ ತಂಡ ಭರ್ಜರಿ ಜಯ ಸಾಧಿಸಿತು.

ನಗರದ ಮೈಸೂರು ವಿಶ್ವವಿದ್ಯಾನಿಲಯದ ಮಿನಿ ಹಾಕಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬೌಂಡರಿ-ಸಿಕ್ಸರ್‌ಗಳ ಹೊಳೆ ಹರಿಯಿತು. 88 ರನ್‌ಗಳ ಬೃಹತ್ ಮೊತ್ತವನ್ನು ವಿಕೆಟ್ ನಷ್ಟವಿಲ್ಲದೆ 1 ಓವರ್ ಬಾಕಿ ಇರುವಂತೆ ಚಚ್ಚಿದ ‘ಆಂದೋಲನ’ ಗೆಲುವಿನ ನಗೆ ಬೀರಿತು.

ಟಾಸ್ ಗೆದ್ದು ಫಿಲ್ಡಿಂಗ್ ಆಯ್ದುಕೊಂಡ ಆಂದೋಲನ ತಂಡದ ಲೆಕ್ಕಚಾರವನ್ನು ವಿಜಯವಾಣಿ ತಂಡದ ರೋಹಿತ್, ಆದರ್ಶ, ಅಂಟೋನಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ಬದಲು ಮಾಡಿತು. ಬೌಂಡರಿ ಸಿಕ್ಸರ್‌ಗಳನ್ನು ಸಿಡಿಸಿ ಅಬ್ಬರಿಸಿದ ಪರಿಣಾಮ ನಿಗದಿತ 6 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 88 ರನ್ ಗಳಿಸಿತು.

ಬೃಹತ್ ಮೊತ್ತ ಗುರಿ ಬೆನ್ನತ್ತಿದ ‘ಆಂದೋಲನ’ ತಂಡದ ನಾಯಕ ಚಿರಂಜೀವಿ ಮತ್ತು ಸುರೇಶ್.ಎಂ ಜೋಡಿಯೂ ವಿಜಯವಾಣಿ ತಂಡದ ಬೌಲರ್‌ಗಳನ್ನು ದಂಡಿಸಿದರು. ಬೌಂಡರಿಗಳ ಸುರಿಮಳೆಗೈದರು.

ಪಂದ್ಯದಲ್ಲಿ 5 ಸಿಕ್ಸರ್ 2 ಆಕರ್ಷಕ ಬೌಂಡರಿ ಸಹಿತ 43 ರನ್‌ಗಳಿಸಿದ ಸುರೇಶ್.ಎಂ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರೇ ಪೈನಲ್‌ನಲ್ಲಿ 41 ರನ್‌ಗಳ ಕೊಡುಗೆ ನೀಡಿ ಟೂರ್ನಿಯುದ್ದಕ್ಕೂ ಬೌಲಿಂಗ್-ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಚಿರಂಜೀವಿ ಸರಣಿ ಶ್ರೇಷ್ಠ ತಮ್ಮದಾಗಿಸಿಕೊಂಡರು. ಆಂದೋಲನ, ಪ್ರತಿನಿಧಿ, ವಿಜಯವಾಣಿ, ಪ್ರಜಾವಾಣಿ, ವಿಜಯ ಕರ್ನಾಟಕ, ಫ್ಲೇಯಿಂಗ್ ೧೧ ತಂಡಗಳು ಭಾಗವಹಿಸಿದ್ದವು.

ಹಿರಿಯ ಪತ್ರಕರ್ತ ಅಂಶಿಪ್ರಸನ್ನ ಕುಮಾರ್ ಅವರು ಬಹುಮಾನ ವಿತರಿಸಿ ಮಾತನಾಡಿ, ಆರೋಗ್ಯದ ಬಗ್ಗೆ ಪತ್ರಕರ್ತರು ಕಾಳಜಿ ವಹಿಸಬೇಕು. ಸದಾ ಬ್ರೇಕಿಂಗ್ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಪತ್ರಕರ್ತರು ಮಾನಸಿಕವಾಗಿ ದೈಹಿಕವಾಗಿ ಅತ್ಯಂತ ಚಟುವಟಿಕೆಯಿಂದ ಇರಲು ಕ್ರೀಡೆ ಸಹಕಾರಿ ಎಂದು ಹೇಳಿದರು.

ಪತ್ರಕರ್ತರು ವೃತ್ತಿ ತ್ಯಜಿಸುವ ತನಕವೂ ಕೆಲಸದ ಒತ್ತಡ ಇರುತ್ತದೆ. ದೀರ್ಘ ಕಾಲ ಕರ್ತವ್ಯ ನಿರ್ವಹಿಸಬೇಕಾದರೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಬೇಕು. ಎಲ್ಲ ಪತ್ರಕರ್ತರು ಒಂದೆಡೆ ಸೇರಿ ಕ್ರೀಡಾಸ್ಪೂರ್ತಿ ಮೆರದಿರುವುದು ಪ್ರಶಂಸನೀಯ. ತಿಂಗಳಿಗೊಮ್ಮೆ ಈ ರೀತಿಯ ಕ್ರೀಡಾಕೂಟ ಸಂಘಟಿಸುಂತೆ ಸಲಹೆ ನೀಡಿದರು.

ಪ್ರಸ್ತುತ ದಿನಮಾನಗಳಲ್ಲಿ ಪತ್ರಕರ್ತರು ತಮ್ಮ ಆರೋಗ್ಯದ ರಕ್ಷಣೆಗೆ ಆದ್ಯತೆ ಕೊಡಬೇಕು. ಕುಟುಂಬದ ಸದಸ್ಯರಿಗೂ ಸಮಯ ಕೊಡಬೇಕು ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

21 mins ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

1 hour ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

2 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

5 hours ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

5 hours ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

5 hours ago