ಮೈಸೂರು ನಗರ

ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ:‌ ಅಂದೋಲನ ಚಾಂಪಿಯನ್‌

ಮೈಸೂರು: ಪತ್ರಕರ್ತರ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿಯ ರೋಚಕ ಫೈನಲ್‌ನಲ್ಲಿ ‘ಆಂದೋಲನ’ ದಿನ ಪತ್ರಿಕೆ ತಂಡ ಭರ್ಜರಿ ಜಯ ಸಾಧಿಸಿತು.

ನಗರದ ಮೈಸೂರು ವಿಶ್ವವಿದ್ಯಾನಿಲಯದ ಮಿನಿ ಹಾಕಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬೌಂಡರಿ-ಸಿಕ್ಸರ್‌ಗಳ ಹೊಳೆ ಹರಿಯಿತು. 88 ರನ್‌ಗಳ ಬೃಹತ್ ಮೊತ್ತವನ್ನು ವಿಕೆಟ್ ನಷ್ಟವಿಲ್ಲದೆ 1 ಓವರ್ ಬಾಕಿ ಇರುವಂತೆ ಚಚ್ಚಿದ ‘ಆಂದೋಲನ’ ಗೆಲುವಿನ ನಗೆ ಬೀರಿತು.

ಟಾಸ್ ಗೆದ್ದು ಫಿಲ್ಡಿಂಗ್ ಆಯ್ದುಕೊಂಡ ಆಂದೋಲನ ತಂಡದ ಲೆಕ್ಕಚಾರವನ್ನು ವಿಜಯವಾಣಿ ತಂಡದ ರೋಹಿತ್, ಆದರ್ಶ, ಅಂಟೋನಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ಬದಲು ಮಾಡಿತು. ಬೌಂಡರಿ ಸಿಕ್ಸರ್‌ಗಳನ್ನು ಸಿಡಿಸಿ ಅಬ್ಬರಿಸಿದ ಪರಿಣಾಮ ನಿಗದಿತ 6 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 88 ರನ್ ಗಳಿಸಿತು.

ಬೃಹತ್ ಮೊತ್ತ ಗುರಿ ಬೆನ್ನತ್ತಿದ ‘ಆಂದೋಲನ’ ತಂಡದ ನಾಯಕ ಚಿರಂಜೀವಿ ಮತ್ತು ಸುರೇಶ್.ಎಂ ಜೋಡಿಯೂ ವಿಜಯವಾಣಿ ತಂಡದ ಬೌಲರ್‌ಗಳನ್ನು ದಂಡಿಸಿದರು. ಬೌಂಡರಿಗಳ ಸುರಿಮಳೆಗೈದರು.

ಪಂದ್ಯದಲ್ಲಿ 5 ಸಿಕ್ಸರ್ 2 ಆಕರ್ಷಕ ಬೌಂಡರಿ ಸಹಿತ 43 ರನ್‌ಗಳಿಸಿದ ಸುರೇಶ್.ಎಂ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರೇ ಪೈನಲ್‌ನಲ್ಲಿ 41 ರನ್‌ಗಳ ಕೊಡುಗೆ ನೀಡಿ ಟೂರ್ನಿಯುದ್ದಕ್ಕೂ ಬೌಲಿಂಗ್-ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಚಿರಂಜೀವಿ ಸರಣಿ ಶ್ರೇಷ್ಠ ತಮ್ಮದಾಗಿಸಿಕೊಂಡರು. ಆಂದೋಲನ, ಪ್ರತಿನಿಧಿ, ವಿಜಯವಾಣಿ, ಪ್ರಜಾವಾಣಿ, ವಿಜಯ ಕರ್ನಾಟಕ, ಫ್ಲೇಯಿಂಗ್ ೧೧ ತಂಡಗಳು ಭಾಗವಹಿಸಿದ್ದವು.

ಹಿರಿಯ ಪತ್ರಕರ್ತ ಅಂಶಿಪ್ರಸನ್ನ ಕುಮಾರ್ ಅವರು ಬಹುಮಾನ ವಿತರಿಸಿ ಮಾತನಾಡಿ, ಆರೋಗ್ಯದ ಬಗ್ಗೆ ಪತ್ರಕರ್ತರು ಕಾಳಜಿ ವಹಿಸಬೇಕು. ಸದಾ ಬ್ರೇಕಿಂಗ್ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಪತ್ರಕರ್ತರು ಮಾನಸಿಕವಾಗಿ ದೈಹಿಕವಾಗಿ ಅತ್ಯಂತ ಚಟುವಟಿಕೆಯಿಂದ ಇರಲು ಕ್ರೀಡೆ ಸಹಕಾರಿ ಎಂದು ಹೇಳಿದರು.

ಪತ್ರಕರ್ತರು ವೃತ್ತಿ ತ್ಯಜಿಸುವ ತನಕವೂ ಕೆಲಸದ ಒತ್ತಡ ಇರುತ್ತದೆ. ದೀರ್ಘ ಕಾಲ ಕರ್ತವ್ಯ ನಿರ್ವಹಿಸಬೇಕಾದರೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಬೇಕು. ಎಲ್ಲ ಪತ್ರಕರ್ತರು ಒಂದೆಡೆ ಸೇರಿ ಕ್ರೀಡಾಸ್ಪೂರ್ತಿ ಮೆರದಿರುವುದು ಪ್ರಶಂಸನೀಯ. ತಿಂಗಳಿಗೊಮ್ಮೆ ಈ ರೀತಿಯ ಕ್ರೀಡಾಕೂಟ ಸಂಘಟಿಸುಂತೆ ಸಲಹೆ ನೀಡಿದರು.

ಪ್ರಸ್ತುತ ದಿನಮಾನಗಳಲ್ಲಿ ಪತ್ರಕರ್ತರು ತಮ್ಮ ಆರೋಗ್ಯದ ರಕ್ಷಣೆಗೆ ಆದ್ಯತೆ ಕೊಡಬೇಕು. ಕುಟುಂಬದ ಸದಸ್ಯರಿಗೂ ಸಮಯ ಕೊಡಬೇಕು ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

4 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

8 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

11 hours ago