ಮೈಸೂರು ನಗರ

ಪತ್ರಿಕಾ ಛಾಯಾಗ್ರಹಣ ವಿಶೇಷ ವೃತ್ತಿ : ರಾಮಸ್ವಾಮಿ ಅಭಿಪ್ರಾಯ

ಮೈಸೂರು : ಪತ್ರಿಕಾ ಛಾಯಾಗ್ರಹಣ ಸವಾಲೊಡ್ಡುವ ಜೊತೆಗೆ ಹೆಚ್ಚು ಖುಷಿ ಕೊಡುವ ಕೆಲಸವಾಗಿದೆ. ಘಟನೆಗಳನ್ನು ಸಾಕ್ಷೀಕರಿಸುವ ಅಪೂರ್ವ ಅವಕಾಶ ಪತ್ರಿಕಾ ಛಾಯಾಗ್ರಾಹಕರಿಗೆ ದೊರೆಯುತ್ತದೆ. ಹೀಗಾಗಿ ಇದೊಂದು ವಿಶೇಷ ವೃತ್ತಿ ಎಂದು ಹಿರಿಯ ಛಾಯಾಗ್ರಾಹಕ ಸಾಗ್ಗೆರೆ ರಾಮಸ್ವಾಮಿ ಅಭಿಪ್ರಾಯಪಟ್ಟರು.

ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಸಂಘದ ಸಭಾಂಗಣದಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಸುದ್ದಿ ಛಾಯಾಗ್ರಹಣ ಪ್ರದರ್ಶನ ಮತ್ತು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು.

ಆರಂಭದಲ್ಲಿ ವರದಿಗಾರನಾಗಿ ನಗರದ ಪತ್ರಿಕೆಯೊಂದರಲ್ಲಿ ಕೆಲಸ ಮಾಡಬೇಕಾದರೂ ಸಂದರ್ಭಗಳ ಕಾರಣ ಕ್ಯಾಮೆರಾ ಹಿಡಿದು ಛಾಯಾಗ್ರಾಹಕನಾದೆ. ಇನ್ನು ಬಹುತೇಕ ಸ್ಪರ್ಧೆಗಳಲ್ಲಿ ರಾಜಕೀಯ ಆಧಾರಿತ ಛಾಯಾಚಿತ್ರಗಳೇ ಇರುತ್ತವೆ. ಆದರೆ ಇಲ್ಲಿ ಅಂತಹ ಕೇವಲ ಎರಡೇ ಚಿತ್ರ ಇದ್ದು, ಉಳಿದವೆಲ್ಲವೂ ಮೈಸೂರು ಸಾಂಸ್ಕೃತಿಕ ನಗರಿ ಎಂಬುದನ್ನು ಪ್ರತಿಬಿಂಬಿಸಿರುವುದು ಸಂತಸ ಉಂಟು ಮಾಡುತ್ತದೆ ಎಂದರು.

ಪ್ರದರ್ಶನ ಉದ್ಘಾಟಿಸಿದ ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಮಾತನಾಡಿ, ಯಾವುದಾದರೂ ಮಹತ್ವದ ಘಟನೆ ನಡೆದರೆ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೂ ಮೊದಲೇ ಛಾಯಾಗ್ರಾಹಕರು ಹಾಜರಿರುತ್ತಾರೆ. ಭಾರತ ವೈವಿಧ್ಯತೆಯಿಂದ ಕೂಡಿದ ದೇಶವಾಗಿದ್ದು, ಇಲ್ಲಿನ ಸೌಹಾರ್ದತೆ, ರಾಜಕೀಯ, ಸಾಮಾಜಿಕ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡು ಸಂದರ್ಭಾನುಸಾರ ಛಾಯಾಚಿತ್ರದ ಮೂಲಕ ಸಾಕ್ಷೀಕರಿಸುವ ಪತ್ರಿಕಾ ಛಾಯಾಗ್ರಾಹಕರ ಸೇವೆ ಮೆಚ್ಚಬೇಕಾದುದಾಗಿದೆ ಎಂದರು.

ಡಿಸಿಪಿ ಕೆ.ಎಸ್.ಸುಂದರ್ ರಾಜ್ ಮಾತನಾಡಿ, ಛಾಯಾಚಿತ್ರ, ವಿಡಿಯೋಗಳು ಅಪರಾಧ ಪತ್ತೆಹಚ್ಚುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಈಚೆಗೆ ದೇಶದಲ್ಲಿ ಕೋಟ್ಯಂತರ ಮಂದಿ ಮೊಬೈಲ್ ಬಳಸುತ್ತಾ, ಅದರಲ್ಲಿ ಛಾಯಾಚಿತ್ರ, ವಿಡಿಯೋ ತೆಗೆಯುವ ಮೂಲಕ ತಾವೂ ಛಾಯಾಗ್ರಾಹಕರೇ ಆಗಿದ್ದಾರೆ. ಒಂದು ದಿನದ ಹಿಂದಷ್ಟೇ ಪಬ್‌ವೊಂದರಲ್ಲಿ ನಗರ ಪೊಲೀಸ್ ಇಲಾಖೆಯ ಅಽಕಾರಿಯೊಬ್ಬರು ಗಲಾಟೆ ಮಾಡಿದ ವಿಡಿಯೋ ವೈರಲ್ ಆದ ಬಳಿಕ ಆತ ಅಮಾನತ್ತಾದರು. ಈ ರೀತಿ ವಿಡಿಯೋಗಳು ಸಹ ಅತ್ಯಂತ ಪ್ರಮುಖ ಪರಿಣಾಮ ಬೀರಬಹುದಾಗಿವೆ ಎಂದರು.

ದಸರಾ ವೇಳೆ ಸುದ್ದಿ ಛಾಯಾಗ್ರಾಹಕರು ತೆಗೆದ ಲ್ಯಾನ್ಸ್‌ಡೌನ್ ಕಟ್ಟಡ, ಇನ್ನಿತರ ಕಡೆಗಳಲ್ಲಿ ಜನರು ಕಿಕ್ಕಿರಿದು ನಿಂತು ವೀಕ್ಷಿಸುವ ಚಿತ್ರಗಳು ಜನರಿಗೆ ಮಾಹಿತಿ ನೀಡುವುದಷ್ಟೇ ಅಲ್ಲ, ಎಂತೆಂತಹ ಜಾಗಗಳಲ್ಲಿ ಪೊಲೀಸರು ನಿಗಾ ಇರಿಸಬೇಕು ಎಂಬುದನ್ನು ಸಹ ತಿಳಿಸುತ್ತವೆ. ಹೀಗಾಗಿ ಪೊಲೀಸ್ ಇಲಾಖೆಗೂ ಸುದ್ದಿ ಛಾಯಾಚಿತ್ರಗಳು ನೆರವಾಗುತ್ತವೆ ಎಂದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಮಾತನಾಡಿ, ಜಗತ್ತಿನ ಎಲ್ಲೇ ಛಾಯಾಚಿತ್ರ ಸ್ಪರ್ಧೆ ನಡೆದರೂ ಮೈಸೂರಿನವರ ಛಾಯಾಚಿತ್ರಗಳು ಇದ್ದೇ ಇರುತ್ತವೆ. ಬಹುಮಾನಗಳಂತೂ ಇವುಗಳಿಗೆ ಬರುವುದು ಸಾಮಾನ್ಯ ಸಂಗತಿಯಾಗಿದೆ. ಹೀಗಾಗಿ ಮೈಸೂರು ಪತ್ರಿಕೆಗಳು ಪ್ರತಿಭಾವಂತ ಛಾಯಾಗ್ರಾಹಕರನ್ನು ಬೆಳೆಸಿವೆ ಎಂದು ಸಂತಸ ವ್ಯಕ್ತಪಡಿಸಿದರು.

ಸ್ಪರ್ಧೆಯಲ್ಲಿ ಮೊದಲನೇ ಬಹುಮಾನ ಪಡೆದ ಉದಯ್ ಶಂಕರ್, ಗವಿಮಠ ರವಿ, ಮಧುಸೂದನ್, ಅನೂಪ್ ಅವರಿಗೆ ನಗದು, ಸ್ಮರಣಿಕೆ ನೀಡಿ ಗೌರವಿಸಲಾಯಿತು. ನರೆಡ್ಕೋ ಅಧ್ಯಕ್ಷ ವಿ.ಸಿ.ರವಿಕುಮಾರ್, ಉದ್ಯಮಿ ಡಾ.ವಿ.ಕಾರ್ತಿಕ್, ಮಮತಾ, ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

2 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

2 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

7 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

7 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

7 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

7 hours ago