ಮೈಸೂರು: ತಾಲೂಕು ಕೇಂದ್ರಗಳಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ. ಭೂಗಳ್ಳರಿಂದ ರೈತರು ಮೋಸ ಹೋಗುತ್ತಿದ್ದು, ಸರ್ಕಾರ ಕೂಡಲೇ ಇತ್ತ ಗಮನಹರಿಸಿ ರೈತರ ಸಮಸ್ಯೆ ಬಗೆಹರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ (ರೈತ ಬಣ)ದ ರಾಜ್ಯಾಧ್ಯಕ್ಷ ಇ.ಎನ್.ಕೃಷ್ಣೇಗೌಡ ಒತ್ತಾಯಿಸಿದರು.
ಇಂದು (ಫೆ.4) ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ. ಕೆಲವರು ರೈತರ ಸೋಗಿನಲ್ಲಿ ಹಸಿರು ಟವಲ್ ಧರಿಸಿ ನಿಜವಾದ ರೈತರಿಗೆ ಮೋಸ ಮಾಡುತ್ತಿದ್ದಾರೆ.
ಜತೆಗೆ ಭೂಗಳ್ಳರ ಹಾವಳಿ ಹೆಚ್ಚಾಗಿದ್ದು, ಅಧಿಕಾರಿಗಳು ಭೂಗಳ್ಳರೊಂದಿಗೆ ಕೈ ಜೋಡಿಸಿ ಸರ್ಕಾರಿ ಭೂಮಿ ಕಬಳಿಸುತ್ತಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಬೇಕು. ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ಮತ್ತೊಂದು ಮುಡಾ ಹಗರಣದಂತಾಗುತ್ತದೆ ಎಂದು ಎಚ್ಚರಿಸಿದರು.
ಜಮೀನು ಉಳುಮೆ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ಕೊಡಬೇಕು. ದುಡ್ಡಿಗಾಗಿ ಯಾರದೋ ಜಮೀನನ್ನು ಯಾರದೋ ಹೆಸರಿಗೆ ಮಾಡಿದರೆ ರೈತರನ್ನು ಒಗ್ಗೂಡಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸದಿದ್ದರೆ ವಿಧಾನಸೌಧ ಚಲೋ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮೈಕ್ರೋ ಫೈನಾನ್ಸ್ಗಳಿಗೆ ಕಡಿವಾಣ ಹಾಕಿ:
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ಗಳ ಹಾವಳಿ ಹೆಚ್ಚಾಗಿದೆ. ಸಾಲಕ್ಕೆ ಹೆದರಿ ರೈತರು ಊರು ಬಿಡುತ್ತಿದ್ದಾರೆ. ಹಲವು ಕಡೆ ಪ್ರತಿನಿತ್ಯ ಒಬ್ಬರಲ್ಲ ಒಬ್ಬರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕ್ಗಳು ನಿಗದಿತ ಸಮಯಕ್ಕೆ ರೈತರಿಗೆ, ಜನ ಸಾಮಾನ್ಯರಿಗೆ ಸಾಲ ನೀಡದ ಕಾರಣ ರೈತರು ಖಾಸಗಿ ಬ್ಯಾಂಕ್, ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆಯುತ್ತಿದ್ದಾರೆ. ಮೊದಲು ಸಾಲ ಕೊಡುವ ಮೈಕ್ರೋ ಫೈನಾನ್ಸ್ಗಳು ನಂತರ ಜನರ ರಕ್ತ ಹೀರುವ ಕೆಲಸ ಮಾಡುತ್ತಿವೆ. ಇದರ ವಿರುದ್ಧ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿರುವುದು ಸ್ವಾಗತಾರ್ಹ ಎಂದರು.
ಮಂಡ್ಯ: ಮಗಳ ಸಾವಿನಿಂದ ಮನನೊಂದ ತಾಯಿ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ…
ಚಾಮರಾಜನಗರ : ಹಲವು ಕುಟುಂಬಗಳನ್ನೇ ಹಾಳು ಮಾಡಿ ಯುವ ಸಮೂಹವನ್ನು ಬೀದಿಗೆ ಬೀಳುವಂತೆ ಮಾಡುತ್ತಿರುವ ಆನ್ಲೈನ್ ಗೇಮ್ಗಳನ್ನು ನಿಷೇಧಿಸಬೇಕು ಎಂದು…
ಹುಣಸೂರು: ಇಲ್ಲಿನ ಬನ್ನಿಕುಪ್ಪೆ ಗ್ರಾಮದ ಮಾರಿಗುಡಿ ಆವರಣದಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಅಧಿಕಾರಿ ಅಶೋಕ್…
ಮೈಸೂರು: ಗ್ಯಾರಂಟಿ ಯೋಜನೆಗಳು ಯಾವುದೇ ಧರ್ಮ, ಜಾತಿ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ. ಗ್ಯಾರಂಟಿ ಯೋಜನೆಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ.…
ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ,…
ಮಂಡ್ಯ: ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ವಲಯವಾಗಿಸಿ ದೃಢೀಕರಣ ಪತ್ರ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ…