ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿಂದು ಪೌರ ಕಾರ್ಮಿಕರಿಗೆ ಚಹಾ, ಬನ್ ಹಾಗೂ ಬಾಳೆಹಣ್ಣು ವಿತರಿಸಲಾಯಿತು.
ನಗರದ ಚಾಮುಂಡಿಪುರಂನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಹಾಗೂ ಅಪೂರ್ವ ಸ್ನೇಹ ಬಳಗದ ಕಾರ್ಯಕರ್ತರು ಪೌರಕಾರ್ಮಿಕರಿಗೆ ಚಹಾ, ಬನ್ ಹಾಗೂ ಬಾಳೆಹಣ್ಣು ವಿತರಣೆ ಮಾಡಿದರು.
ಇದನ್ನು ಓದಿ : ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ: ಗಣ್ಯರಿಂದ ಶುಭಾಶಯ
ಈ ವೇಳೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ದೇಶದ ಮುಂದಿನ ಭವಿಷ್ಯಕ್ಕಾಗಿ ಆರ್ಥಿಕವಾಗಿ ಭದ್ರ ಬುನಾದಿ ಹಾಗೂ ದೇಶದ ಗಡಿಯನ್ನು ಬಲಿಷ್ಠಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ದೇಶದ ಪ್ರಗತಿಗಾಗಿ ಪೌರಕಾರ್ಮಿಕರ ಸ್ವಚ್ಛತಾ ಕಾರ್ಯ ಸೇವೆ ಪ್ರಮುಖವಾದದ್ದು ಎಂದು ಹೇಳಿದರು.
ಈ ವೇಳೆ ಮಾಜಿ ನಗರ ಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್, ಎಂ.ಟಡಿ.ಪಾರ್ಥಸಾರಥಿ, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.





