ಮೈಸೂರು ನಗರ

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ

ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮೈಸೂರು ಮಹಾನಗರಪಾಲಿಕೆಯು ಬಜೆಟ್‌ನಲ್ಲಿ ಹಲವಾರು ಹೊಸ ಕಾರ್ಯಕ್ರಮಗಳನ್ನು ಘೋಷಿಸಿದೆ.

ಬೃಹತ್ ಮೈಸೂರು ಮಹಾನಗರಪಾಲಿಕೆಯಾಗಿರುವ ಕಾರಣಕ್ಕಾಗಿ ಮೂಲ ಸೌಕರ್ಯಗಳ ಅಭಿವೃದ್ಧಿಗೂ ಗಮನಹರಿಸಿ ಅನುದಾನ ಕಾಯ್ದಿರಿಸಲಾಗಿದೆ.

ನಗರಪಾಲಿಕೆ ಸಭಾಂಗಣದಲ್ಲಿ ಬುಧವಾರ ನಡೆದ ವಿಶೇಷ ಸಭೆಯಲ್ಲಿ ಆಡಳಿತಾಧಿಕಾರಿ ನಿತೇಶ್ ಪಾಟೀಲ್ ಅವರು 2026-27ನೇ ಸಾಲಿನ ಆಯವ್ಯಯವನ್ನು ಮಂಡಿಸಿದರು. 2025-26ನೇ ಸಾಲಿನ ಆಯವ್ಯಯ ದಲ್ಲಿ 933.20 ಕೋಟಿ ರೂ.ಗಳ ಜಮೆಗಳನ್ನು ನಿರೀಕ್ಷಿಸಲಾಗಿತ್ತಾ ದರೂ ಡಿಸೆಂಬರ್ ಅಂತ್ಯಕ್ಕೆ 615.86 ಕೋಟಿ ರೂ. ಜಮೆಗಳನ್ನು ಸ್ವೀಕರಿಸಲಾಗಿದೆ.

2025-26ನೇ ಸಾಲಿನ ಆಯವ್ಯಯದಲ್ಲಿ 1234.06 ಕೋಟಿರೂ.ಗಳನ್ನುಪಾವತಿಸಲು ಅವಕಾಶಮಾಡಲಾಗಿತ್ತು. ಆದರೆ, ನಗರಪಾಲಿಕೆಯು ಸ್ವಯಂ ಸಂಪನ್ಮೂಲಗಳ ಕ್ರೋಢೀಕರಣದ ಹಾಗೂ ಸರ್ಕಾರದಿಂದ ಬಿಡುಗಡೆ ಯಾಗುವ ಅನುದಾನಗಳ ಆಧಾರದ ಮೇಲೆ ವೆಚ್ಚ ಭರಿಸ ಬೇಕಾಗಿರುವುದರಿಂದ ಸ್ವಯಂ ಸಂಪನ್ಮೂಲಗಳ ಹಾಗೂ ಅನುದಾನಗಳ ಲಭ್ಯತೆಗೆ ಅನುಸಾರವಾಗಿ ಡಿಸೆಂಬರ್ ಅಂತ್ಯಕ್ಕೆ 598.50 ಕೋಟಿ ರೂ.ಗಳನ್ನು ಪಾವತಿಸಲಾಗಿದೆ. ಹಾಗಾಗಿ, 2026-27ನೇ ಸಾಲಿನಲ್ಲಿ ಯಾವುದೇ ಸಂಸ್ಥೆಯು ಪರಿಣಾಮಕಾರಿ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕಾದರೆ ಹಣಕಾಸಿನ ಲಭ್ಯತೆ ಅತ್ಯವಶ್ಯಕವಾಗಿರುವುದರಿಂದ ಪಾಲಿಕೆಯ ಜಮೆಗಳ ಕ್ರೋಢೀಕರಣಕ್ಕೆ ಸಂಬಂಧಿಸಿದಂತೆ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದಾಯ ಸಂಗ್ರಹಕ್ಕೆ ಸರಳೀಕರಣವನ್ನೂ ಮಾಡಲಾಗಿದೆ ಎಂದು ಪ್ರಕಟಿಸಿದರು.

ಯಾವ್ಯಾವ ಮೂಲಗಳಿಂದ ಆದಾಯ?:
ಆಸ್ತಿ ತೆರಿಗೆ ಹಾಗೂ ಖಾತಾ ವರ್ಗಾವಣೆ ಶುಲ್ಕ, ಖಾತಾ ಪ್ರತಿಗಳ ಶುಲ್ಕ, ಜಾಹೀರಾತು ಶುಲ್ಕದಿಂದ 286.72 ಕೋಟಿ ರೂ., ನೀರಿನ ತೆರಿಗೆ ಹಾಗೂ ಒಳಚರಂಡಿ ನಿರ್ವಹಣಾ ಕರದಿಂದ115.35 ಕೋಟಿ ರೂ., ಯೋಜನೆಗಳು ಮತ್ತು ನಿಬಂಧನೆಗಳು, ನಗರ ಮತ್ತು ಪಟ್ಟಣ ಯೋಜನೆಯಿಂದ 17.50 ಕೋಟಿ ರೂ., ಉದ್ದಿಮೆ ಪರವಾನಗಿ ಶುಲ್ಕದಿಂದ 8.84 ಲಕ್ಷ ರೂ., ನಗರಪಾಲಿಕೆ ಆಸ್ತಿಗಳಿಂದ ಬರುವ ಬಾಡಿಗೆಯಿಂದ 6.49 ಕೋಟಿ ರೂ., ಜಾಹೀರಾತು ಶುಲ್ಕದಿಂದ 2 ಕೋಟಿ ರೂ.ಗಳ ಆದಾಯ ನಿರೀಕ್ಷಿಸಲಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಹೊರಗುತ್ತಿಗೆ ಪೌರಕಾರ್ಮಿಕರ ಹಾಗೂ ವಿಶೇಷ ನೇಮಕಾತಿಯಡಿ ನೇಮಕವಾಗಿರುವ ಪೌರ ಕಾರ್ಮಿಕರ ವೇತನಕ್ಕಾಗಿ 33.47 ಕೋಟಿ ರೂ., ರಾಜ್ಯ ಸರ್ಕಾರದಿಂದ ಬೀದಿ ದೀಪ ಹಾಗೂ ನೀರು ಸರಬರಾಜು ಸ್ಥಾವರಗಳ ವಿದ್ಯುತ್ ಬಿಲ್ ಪಾವತಿಗಾಗಿ 96.36 ಕೋಟಿ ರೂ., ರಾಜ್ಯ ಹಣಕಾಸು ಆಯೋಗದಿಂದ ಪಾಲಿಕೆ ಕಾಯಂ ಅಧಿಕಾರಿ, ನೌಕರರ ವೇತನ, ನಿವೃತ್ತ ನೌಕರರ ಪಿಂಚಣಿ ವಂತಿಕೆ ಅನುದಾನವಾಗಿ 90.38 ಕೋಟಿ ರೂ., 16ನೇ ಹಣಕಾಸು ಆಯೋಗದಿಂದ 110.3 ಕೋಟಿ ರೂ.ಗಳ ಅನುದಾನವನ್ನು ಸರ್ಕಾರದಿಂದ ನಿರೀಕ್ಷಿಸಲಾಗಿದೆ.

ನಗರದ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ಕಾಳಜಿ ಹೊಂದಿರುವ ಲೋಕಸಭಾ, ವಿಧಾನಸಭಾ, ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಿಂದ 45 ಲಕ್ಷ ರೂ, ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ರಸ್ತೆಗಳ ಅಭಿವೃದ್ಧಿಗೆ 57.3 ಕೋಟಿ ರೂ. ನಿರೀಕ್ಷಿಸಲಾಗಿದೆ. ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ 1ರಡಿ 100 ಕೋಟಿ ರೂ., ಮಹಾತ್ಮಗಾಂಧಿ ನಗರ ಏಕಾಸ ಯೋಜನೆ 2ರಡಿ 100 ಕೋಟಿ ರೂ., ಕೇಂದ್ರ ಸರ್ಕಾರದ ಸ್ವಚ್ಛಭಾರತ್ 2 ಅನುದಾನದಡಿ 132.8 ಕೋಟಿ ರೂ., ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಉದ್ಯಾನವನಗಳು ಮತ್ತು ಜಲಸಂಪನ್ಮೂಲ ಅಭಿವೃದ್ಧಿಗಾಗಿ 150 ಕೋಟಿ ರೂ., ರಾಜ್ಯ ವಿಪತ್ತು ಉಪಶಮನ ನಿಧಿಯಿಂದ 1 ಕೋಟಿ ರೂ., ನಗರದಲ್ಲಿ ಸಂಗ್ರಹಣೆಯಾಗುತ್ತಿರುವ ಪಾರಂಪರಿಕ ತ್ಯಾಜ್ಯದ ವೈಜ್ಞಾನಿಕ ನಿರ್ವಹಣೆಗಾಗಿ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯಿಂದ 260.6 ಕೋಟಿ ರೂ. ನಿರೀಕ್ಷಿಸಲಾಗಿದೆ.

 

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

4 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

5 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

7 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

7 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

10 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

11 hours ago