ಮೈಸೂರು ನಗರ

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ

ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮೈಸೂರು ಮಹಾನಗರಪಾಲಿಕೆಯು ಬಜೆಟ್‌ನಲ್ಲಿ ಹಲವಾರು ಹೊಸ ಕಾರ್ಯಕ್ರಮಗಳನ್ನು ಘೋಷಿಸಿದೆ.

ಬೃಹತ್ ಮೈಸೂರು ಮಹಾನಗರಪಾಲಿಕೆಯಾಗಿರುವ ಕಾರಣಕ್ಕಾಗಿ ಮೂಲ ಸೌಕರ್ಯಗಳ ಅಭಿವೃದ್ಧಿಗೂ ಗಮನಹರಿಸಿ ಅನುದಾನ ಕಾಯ್ದಿರಿಸಲಾಗಿದೆ.

ನಗರಪಾಲಿಕೆ ಸಭಾಂಗಣದಲ್ಲಿ ಬುಧವಾರ ನಡೆದ ವಿಶೇಷ ಸಭೆಯಲ್ಲಿ ಆಡಳಿತಾಧಿಕಾರಿ ನಿತೇಶ್ ಪಾಟೀಲ್ ಅವರು 2026-27ನೇ ಸಾಲಿನ ಆಯವ್ಯಯವನ್ನು ಮಂಡಿಸಿದರು. 2025-26ನೇ ಸಾಲಿನ ಆಯವ್ಯಯ ದಲ್ಲಿ 933.20 ಕೋಟಿ ರೂ.ಗಳ ಜಮೆಗಳನ್ನು ನಿರೀಕ್ಷಿಸಲಾಗಿತ್ತಾ ದರೂ ಡಿಸೆಂಬರ್ ಅಂತ್ಯಕ್ಕೆ 615.86 ಕೋಟಿ ರೂ. ಜಮೆಗಳನ್ನು ಸ್ವೀಕರಿಸಲಾಗಿದೆ.

2025-26ನೇ ಸಾಲಿನ ಆಯವ್ಯಯದಲ್ಲಿ 1234.06 ಕೋಟಿರೂ.ಗಳನ್ನುಪಾವತಿಸಲು ಅವಕಾಶಮಾಡಲಾಗಿತ್ತು. ಆದರೆ, ನಗರಪಾಲಿಕೆಯು ಸ್ವಯಂ ಸಂಪನ್ಮೂಲಗಳ ಕ್ರೋಢೀಕರಣದ ಹಾಗೂ ಸರ್ಕಾರದಿಂದ ಬಿಡುಗಡೆ ಯಾಗುವ ಅನುದಾನಗಳ ಆಧಾರದ ಮೇಲೆ ವೆಚ್ಚ ಭರಿಸ ಬೇಕಾಗಿರುವುದರಿಂದ ಸ್ವಯಂ ಸಂಪನ್ಮೂಲಗಳ ಹಾಗೂ ಅನುದಾನಗಳ ಲಭ್ಯತೆಗೆ ಅನುಸಾರವಾಗಿ ಡಿಸೆಂಬರ್ ಅಂತ್ಯಕ್ಕೆ 598.50 ಕೋಟಿ ರೂ.ಗಳನ್ನು ಪಾವತಿಸಲಾಗಿದೆ. ಹಾಗಾಗಿ, 2026-27ನೇ ಸಾಲಿನಲ್ಲಿ ಯಾವುದೇ ಸಂಸ್ಥೆಯು ಪರಿಣಾಮಕಾರಿ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕಾದರೆ ಹಣಕಾಸಿನ ಲಭ್ಯತೆ ಅತ್ಯವಶ್ಯಕವಾಗಿರುವುದರಿಂದ ಪಾಲಿಕೆಯ ಜಮೆಗಳ ಕ್ರೋಢೀಕರಣಕ್ಕೆ ಸಂಬಂಧಿಸಿದಂತೆ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದಾಯ ಸಂಗ್ರಹಕ್ಕೆ ಸರಳೀಕರಣವನ್ನೂ ಮಾಡಲಾಗಿದೆ ಎಂದು ಪ್ರಕಟಿಸಿದರು.

ಯಾವ್ಯಾವ ಮೂಲಗಳಿಂದ ಆದಾಯ?:
ಆಸ್ತಿ ತೆರಿಗೆ ಹಾಗೂ ಖಾತಾ ವರ್ಗಾವಣೆ ಶುಲ್ಕ, ಖಾತಾ ಪ್ರತಿಗಳ ಶುಲ್ಕ, ಜಾಹೀರಾತು ಶುಲ್ಕದಿಂದ 286.72 ಕೋಟಿ ರೂ., ನೀರಿನ ತೆರಿಗೆ ಹಾಗೂ ಒಳಚರಂಡಿ ನಿರ್ವಹಣಾ ಕರದಿಂದ115.35 ಕೋಟಿ ರೂ., ಯೋಜನೆಗಳು ಮತ್ತು ನಿಬಂಧನೆಗಳು, ನಗರ ಮತ್ತು ಪಟ್ಟಣ ಯೋಜನೆಯಿಂದ 17.50 ಕೋಟಿ ರೂ., ಉದ್ದಿಮೆ ಪರವಾನಗಿ ಶುಲ್ಕದಿಂದ 8.84 ಲಕ್ಷ ರೂ., ನಗರಪಾಲಿಕೆ ಆಸ್ತಿಗಳಿಂದ ಬರುವ ಬಾಡಿಗೆಯಿಂದ 6.49 ಕೋಟಿ ರೂ., ಜಾಹೀರಾತು ಶುಲ್ಕದಿಂದ 2 ಕೋಟಿ ರೂ.ಗಳ ಆದಾಯ ನಿರೀಕ್ಷಿಸಲಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಹೊರಗುತ್ತಿಗೆ ಪೌರಕಾರ್ಮಿಕರ ಹಾಗೂ ವಿಶೇಷ ನೇಮಕಾತಿಯಡಿ ನೇಮಕವಾಗಿರುವ ಪೌರ ಕಾರ್ಮಿಕರ ವೇತನಕ್ಕಾಗಿ 33.47 ಕೋಟಿ ರೂ., ರಾಜ್ಯ ಸರ್ಕಾರದಿಂದ ಬೀದಿ ದೀಪ ಹಾಗೂ ನೀರು ಸರಬರಾಜು ಸ್ಥಾವರಗಳ ವಿದ್ಯುತ್ ಬಿಲ್ ಪಾವತಿಗಾಗಿ 96.36 ಕೋಟಿ ರೂ., ರಾಜ್ಯ ಹಣಕಾಸು ಆಯೋಗದಿಂದ ಪಾಲಿಕೆ ಕಾಯಂ ಅಧಿಕಾರಿ, ನೌಕರರ ವೇತನ, ನಿವೃತ್ತ ನೌಕರರ ಪಿಂಚಣಿ ವಂತಿಕೆ ಅನುದಾನವಾಗಿ 90.38 ಕೋಟಿ ರೂ., 16ನೇ ಹಣಕಾಸು ಆಯೋಗದಿಂದ 110.3 ಕೋಟಿ ರೂ.ಗಳ ಅನುದಾನವನ್ನು ಸರ್ಕಾರದಿಂದ ನಿರೀಕ್ಷಿಸಲಾಗಿದೆ.

ನಗರದ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ಕಾಳಜಿ ಹೊಂದಿರುವ ಲೋಕಸಭಾ, ವಿಧಾನಸಭಾ, ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಿಂದ 45 ಲಕ್ಷ ರೂ, ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ರಸ್ತೆಗಳ ಅಭಿವೃದ್ಧಿಗೆ 57.3 ಕೋಟಿ ರೂ. ನಿರೀಕ್ಷಿಸಲಾಗಿದೆ. ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ 1ರಡಿ 100 ಕೋಟಿ ರೂ., ಮಹಾತ್ಮಗಾಂಧಿ ನಗರ ಏಕಾಸ ಯೋಜನೆ 2ರಡಿ 100 ಕೋಟಿ ರೂ., ಕೇಂದ್ರ ಸರ್ಕಾರದ ಸ್ವಚ್ಛಭಾರತ್ 2 ಅನುದಾನದಡಿ 132.8 ಕೋಟಿ ರೂ., ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಉದ್ಯಾನವನಗಳು ಮತ್ತು ಜಲಸಂಪನ್ಮೂಲ ಅಭಿವೃದ್ಧಿಗಾಗಿ 150 ಕೋಟಿ ರೂ., ರಾಜ್ಯ ವಿಪತ್ತು ಉಪಶಮನ ನಿಧಿಯಿಂದ 1 ಕೋಟಿ ರೂ., ನಗರದಲ್ಲಿ ಸಂಗ್ರಹಣೆಯಾಗುತ್ತಿರುವ ಪಾರಂಪರಿಕ ತ್ಯಾಜ್ಯದ ವೈಜ್ಞಾನಿಕ ನಿರ್ವಹಣೆಗಾಗಿ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯಿಂದ 260.6 ಕೋಟಿ ರೂ. ನಿರೀಕ್ಷಿಸಲಾಗಿದೆ.

 

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

6 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

6 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago