ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ
ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮೈಸೂರು ಮಹಾನಗರಪಾಲಿಕೆಯು ಬಜೆಟ್ನಲ್ಲಿ ಹಲವಾರು ಹೊಸ ಕಾರ್ಯಕ್ರಮಗಳನ್ನು ಘೋಷಿಸಿದೆ.
ಬೃಹತ್ ಮೈಸೂರು ಮಹಾನಗರಪಾಲಿಕೆಯಾಗಿರುವ ಕಾರಣಕ್ಕಾಗಿ ಮೂಲ ಸೌಕರ್ಯಗಳ ಅಭಿವೃದ್ಧಿಗೂ ಗಮನಹರಿಸಿ ಅನುದಾನ ಕಾಯ್ದಿರಿಸಲಾಗಿದೆ.
ನಗರಪಾಲಿಕೆ ಸಭಾಂಗಣದಲ್ಲಿ ಬುಧವಾರ ನಡೆದ ವಿಶೇಷ ಸಭೆಯಲ್ಲಿ ಆಡಳಿತಾಧಿಕಾರಿ ನಿತೇಶ್ ಪಾಟೀಲ್ ಅವರು 2026-27ನೇ ಸಾಲಿನ ಆಯವ್ಯಯವನ್ನು ಮಂಡಿಸಿದರು. 2025-26ನೇ ಸಾಲಿನ ಆಯವ್ಯಯ ದಲ್ಲಿ 933.20 ಕೋಟಿ ರೂ.ಗಳ ಜಮೆಗಳನ್ನು ನಿರೀಕ್ಷಿಸಲಾಗಿತ್ತಾ ದರೂ ಡಿಸೆಂಬರ್ ಅಂತ್ಯಕ್ಕೆ 615.86 ಕೋಟಿ ರೂ. ಜಮೆಗಳನ್ನು ಸ್ವೀಕರಿಸಲಾಗಿದೆ.
2025-26ನೇ ಸಾಲಿನ ಆಯವ್ಯಯದಲ್ಲಿ 1234.06 ಕೋಟಿರೂ.ಗಳನ್ನುಪಾವತಿಸಲು ಅವಕಾಶಮಾಡಲಾಗಿತ್ತು. ಆದರೆ, ನಗರಪಾಲಿಕೆಯು ಸ್ವಯಂ ಸಂಪನ್ಮೂಲಗಳ ಕ್ರೋಢೀಕರಣದ ಹಾಗೂ ಸರ್ಕಾರದಿಂದ ಬಿಡುಗಡೆ ಯಾಗುವ ಅನುದಾನಗಳ ಆಧಾರದ ಮೇಲೆ ವೆಚ್ಚ ಭರಿಸ ಬೇಕಾಗಿರುವುದರಿಂದ ಸ್ವಯಂ ಸಂಪನ್ಮೂಲಗಳ ಹಾಗೂ ಅನುದಾನಗಳ ಲಭ್ಯತೆಗೆ ಅನುಸಾರವಾಗಿ ಡಿಸೆಂಬರ್ ಅಂತ್ಯಕ್ಕೆ 598.50 ಕೋಟಿ ರೂ.ಗಳನ್ನು ಪಾವತಿಸಲಾಗಿದೆ. ಹಾಗಾಗಿ, 2026-27ನೇ ಸಾಲಿನಲ್ಲಿ ಯಾವುದೇ ಸಂಸ್ಥೆಯು ಪರಿಣಾಮಕಾರಿ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕಾದರೆ ಹಣಕಾಸಿನ ಲಭ್ಯತೆ ಅತ್ಯವಶ್ಯಕವಾಗಿರುವುದರಿಂದ ಪಾಲಿಕೆಯ ಜಮೆಗಳ ಕ್ರೋಢೀಕರಣಕ್ಕೆ ಸಂಬಂಧಿಸಿದಂತೆ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದಾಯ ಸಂಗ್ರಹಕ್ಕೆ ಸರಳೀಕರಣವನ್ನೂ ಮಾಡಲಾಗಿದೆ ಎಂದು ಪ್ರಕಟಿಸಿದರು.
ಯಾವ್ಯಾವ ಮೂಲಗಳಿಂದ ಆದಾಯ?:
ಆಸ್ತಿ ತೆರಿಗೆ ಹಾಗೂ ಖಾತಾ ವರ್ಗಾವಣೆ ಶುಲ್ಕ, ಖಾತಾ ಪ್ರತಿಗಳ ಶುಲ್ಕ, ಜಾಹೀರಾತು ಶುಲ್ಕದಿಂದ 286.72 ಕೋಟಿ ರೂ., ನೀರಿನ ತೆರಿಗೆ ಹಾಗೂ ಒಳಚರಂಡಿ ನಿರ್ವಹಣಾ ಕರದಿಂದ115.35 ಕೋಟಿ ರೂ., ಯೋಜನೆಗಳು ಮತ್ತು ನಿಬಂಧನೆಗಳು, ನಗರ ಮತ್ತು ಪಟ್ಟಣ ಯೋಜನೆಯಿಂದ 17.50 ಕೋಟಿ ರೂ., ಉದ್ದಿಮೆ ಪರವಾನಗಿ ಶುಲ್ಕದಿಂದ 8.84 ಲಕ್ಷ ರೂ., ನಗರಪಾಲಿಕೆ ಆಸ್ತಿಗಳಿಂದ ಬರುವ ಬಾಡಿಗೆಯಿಂದ 6.49 ಕೋಟಿ ರೂ., ಜಾಹೀರಾತು ಶುಲ್ಕದಿಂದ 2 ಕೋಟಿ ರೂ.ಗಳ ಆದಾಯ ನಿರೀಕ್ಷಿಸಲಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಹೊರಗುತ್ತಿಗೆ ಪೌರಕಾರ್ಮಿಕರ ಹಾಗೂ ವಿಶೇಷ ನೇಮಕಾತಿಯಡಿ ನೇಮಕವಾಗಿರುವ ಪೌರ ಕಾರ್ಮಿಕರ ವೇತನಕ್ಕಾಗಿ 33.47 ಕೋಟಿ ರೂ., ರಾಜ್ಯ ಸರ್ಕಾರದಿಂದ ಬೀದಿ ದೀಪ ಹಾಗೂ ನೀರು ಸರಬರಾಜು ಸ್ಥಾವರಗಳ ವಿದ್ಯುತ್ ಬಿಲ್ ಪಾವತಿಗಾಗಿ 96.36 ಕೋಟಿ ರೂ., ರಾಜ್ಯ ಹಣಕಾಸು ಆಯೋಗದಿಂದ ಪಾಲಿಕೆ ಕಾಯಂ ಅಧಿಕಾರಿ, ನೌಕರರ ವೇತನ, ನಿವೃತ್ತ ನೌಕರರ ಪಿಂಚಣಿ ವಂತಿಕೆ ಅನುದಾನವಾಗಿ 90.38 ಕೋಟಿ ರೂ., 16ನೇ ಹಣಕಾಸು ಆಯೋಗದಿಂದ 110.3 ಕೋಟಿ ರೂ.ಗಳ ಅನುದಾನವನ್ನು ಸರ್ಕಾರದಿಂದ ನಿರೀಕ್ಷಿಸಲಾಗಿದೆ.
ನಗರದ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ಕಾಳಜಿ ಹೊಂದಿರುವ ಲೋಕಸಭಾ, ವಿಧಾನಸಭಾ, ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಿಂದ 45 ಲಕ್ಷ ರೂ, ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ರಸ್ತೆಗಳ ಅಭಿವೃದ್ಧಿಗೆ 57.3 ಕೋಟಿ ರೂ. ನಿರೀಕ್ಷಿಸಲಾಗಿದೆ. ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ 1ರಡಿ 100 ಕೋಟಿ ರೂ., ಮಹಾತ್ಮಗಾಂಧಿ ನಗರ ಏಕಾಸ ಯೋಜನೆ 2ರಡಿ 100 ಕೋಟಿ ರೂ., ಕೇಂದ್ರ ಸರ್ಕಾರದ ಸ್ವಚ್ಛಭಾರತ್ 2 ಅನುದಾನದಡಿ 132.8 ಕೋಟಿ ರೂ., ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಉದ್ಯಾನವನಗಳು ಮತ್ತು ಜಲಸಂಪನ್ಮೂಲ ಅಭಿವೃದ್ಧಿಗಾಗಿ 150 ಕೋಟಿ ರೂ., ರಾಜ್ಯ ವಿಪತ್ತು ಉಪಶಮನ ನಿಧಿಯಿಂದ 1 ಕೋಟಿ ರೂ., ನಗರದಲ್ಲಿ ಸಂಗ್ರಹಣೆಯಾಗುತ್ತಿರುವ ಪಾರಂಪರಿಕ ತ್ಯಾಜ್ಯದ ವೈಜ್ಞಾನಿಕ ನಿರ್ವಹಣೆಗಾಗಿ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯಿಂದ 260.6 ಕೋಟಿ ರೂ. ನಿರೀಕ್ಷಿಸಲಾಗಿದೆ.
ಎಚ್.ಎಸ್.ದಿನೇಶ್ ಕುಮಾರ್ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…
ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…
ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…
ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…