ಮೈಸೂರು : ಇಂದು ಮತ್ತು ನಾಳೆ ಕೂಡ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ನಿನ್ನೆ ಮೊದಲ ಆಷಾಢ ಶುಕ್ರವಾರದ ಪ್ರಯುಕ್ತ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸುವ ಕಾರಣ ಯಾವುದೇ ರೀತಿ ಪಾರ್ಕಿಂಗ್ ಸಮಸ್ಯೆ, ಟ್ರಾಫಿಕ್ ಸಮಸ್ಯೆ, ಹಾಗೂ ಭಕ್ತರಿಗೆ ಯಾವುದೇ ತೊಂದರೆ ಆಗಬಾರದು ಎನ್ನುವ ದೃಷ್ಠಿಯಿಂದ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳನ್ನ ನಿಷೇಧಿಸಲಾಗಿತ್ತು. ಅಲ್ಲದೆ ಉಚಿತ ಬಸ್ ಗಳ ಮೂಲಕವೇ ಲಲಿತ ಮಹಲ್ ಪಾರ್ಕಿಂಗ್ ನಿಂದ ಭಕ್ತರನ್ನ ಚಾಮುಂಡಿಬೆಟ್ಟಕ್ಕೆ ಕರೆದುಕೊಂಡು ಹೋಗಲಾಗಿತ್ತು.
ಇನ್ನು ವೀಕೆಂಡ್ ಇರುವ ಕಾರಣ ಇಂದು ಮತ್ತು ನಾಳೆ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಚಾಮುಂಡಿಬೆಟ್ಟಕ್ಕೆ ಭೇಟಿ ಕೊಡುತ್ತಾರೆ. ಹೀಗಾಗಿ ಇಂದು ಮತ್ತು ನಾಳೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧವಿಧಿಸಲಾಗಿದೆ.
ನಿನ್ನೆ ಮೊದಲ ಅಷಾಢ ಶುಕ್ರವಾರ ಪ್ರಯುಕ್ತ ಎಲ್ಲಾ ಭಕ್ತರಿಗೂ ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು. ಆದರೆ ಇಂದು ಯಾವುದೇ ರೀತಿ ಉಚಿತ ಬಸ್ ವ್ಯವಸ್ಥೆ ಇಲ್ಲ. ಬದಲಾಗಿ ಬಸ್ ನಲ್ಲಿ ಟಿಕೆಟ್ ಪಡೆದು ಪ್ರಯಾಣಿಸಬೇಕು.
ಸಾರ್ವಜನಿಕರು ತಮ್ಮ ವಾಹನವನ್ನು ಲಲಿತಮಹಲ್ ಪಾರ್ಕಿಂಗ್ ನಲ್ಲೆ ನಿಲ್ಲಿಸಿ ಕೆ.ಎಸ್.ಆರ್.ಟಿ.ಸಿ ವಾಹನಗಳ ಮೂಲಕ ಹಣ ಪಾವತಿ ಮಾಡಿ ಟಿಕೆಟ್ ಪಡೆದು ಬೆಟ್ಟಕ್ಕೆ ಹೋಗಬೇಕು. ಮಹಿಳೆಯರಿಗೆ ಶಕ್ತಿಯೋಜನೆ ಅನ್ವಹಿಸುತ್ತದೆ.
ಇನ್ನು ಚಾಮುಂಡಿಬೆಟ್ಟದ ಗ್ರಾಮಸ್ಥರು ಈ ಸಮಯದಲ್ಲಿ ಚಾಮುಂಡಿಬೆಟ್ಟದ ಗ್ರಾಮದಲ್ಲಿ ವಿಳಾಸವಿರುವ ಆಧಾರ್ ಕಾರ್ಡ್ ಅನ್ನು ಹಾಜರು ಪಡಿಸಿ ಅಥವಾ ಪರಿಶೀಲನೆಗೆ ಒಳಪಡಿಸಿ ಪ್ರವೇಶವನ್ನು ಪಡೆಯಬಹುದು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…