ಮೈಸೂರು : ಇಂದು ಮತ್ತು ನಾಳೆ ಕೂಡ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ನಿನ್ನೆ ಮೊದಲ ಆಷಾಢ ಶುಕ್ರವಾರದ ಪ್ರಯುಕ್ತ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸುವ ಕಾರಣ ಯಾವುದೇ ರೀತಿ ಪಾರ್ಕಿಂಗ್ ಸಮಸ್ಯೆ, ಟ್ರಾಫಿಕ್ ಸಮಸ್ಯೆ, ಹಾಗೂ ಭಕ್ತರಿಗೆ ಯಾವುದೇ ತೊಂದರೆ ಆಗಬಾರದು ಎನ್ನುವ ದೃಷ್ಠಿಯಿಂದ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳನ್ನ ನಿಷೇಧಿಸಲಾಗಿತ್ತು. ಅಲ್ಲದೆ ಉಚಿತ ಬಸ್ ಗಳ ಮೂಲಕವೇ ಲಲಿತ ಮಹಲ್ ಪಾರ್ಕಿಂಗ್ ನಿಂದ ಭಕ್ತರನ್ನ ಚಾಮುಂಡಿಬೆಟ್ಟಕ್ಕೆ ಕರೆದುಕೊಂಡು ಹೋಗಲಾಗಿತ್ತು.
ಇನ್ನು ವೀಕೆಂಡ್ ಇರುವ ಕಾರಣ ಇಂದು ಮತ್ತು ನಾಳೆ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಚಾಮುಂಡಿಬೆಟ್ಟಕ್ಕೆ ಭೇಟಿ ಕೊಡುತ್ತಾರೆ. ಹೀಗಾಗಿ ಇಂದು ಮತ್ತು ನಾಳೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧವಿಧಿಸಲಾಗಿದೆ.
ನಿನ್ನೆ ಮೊದಲ ಅಷಾಢ ಶುಕ್ರವಾರ ಪ್ರಯುಕ್ತ ಎಲ್ಲಾ ಭಕ್ತರಿಗೂ ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು. ಆದರೆ ಇಂದು ಯಾವುದೇ ರೀತಿ ಉಚಿತ ಬಸ್ ವ್ಯವಸ್ಥೆ ಇಲ್ಲ. ಬದಲಾಗಿ ಬಸ್ ನಲ್ಲಿ ಟಿಕೆಟ್ ಪಡೆದು ಪ್ರಯಾಣಿಸಬೇಕು.
ಸಾರ್ವಜನಿಕರು ತಮ್ಮ ವಾಹನವನ್ನು ಲಲಿತಮಹಲ್ ಪಾರ್ಕಿಂಗ್ ನಲ್ಲೆ ನಿಲ್ಲಿಸಿ ಕೆ.ಎಸ್.ಆರ್.ಟಿ.ಸಿ ವಾಹನಗಳ ಮೂಲಕ ಹಣ ಪಾವತಿ ಮಾಡಿ ಟಿಕೆಟ್ ಪಡೆದು ಬೆಟ್ಟಕ್ಕೆ ಹೋಗಬೇಕು. ಮಹಿಳೆಯರಿಗೆ ಶಕ್ತಿಯೋಜನೆ ಅನ್ವಹಿಸುತ್ತದೆ.
ಇನ್ನು ಚಾಮುಂಡಿಬೆಟ್ಟದ ಗ್ರಾಮಸ್ಥರು ಈ ಸಮಯದಲ್ಲಿ ಚಾಮುಂಡಿಬೆಟ್ಟದ ಗ್ರಾಮದಲ್ಲಿ ವಿಳಾಸವಿರುವ ಆಧಾರ್ ಕಾರ್ಡ್ ಅನ್ನು ಹಾಜರು ಪಡಿಸಿ ಅಥವಾ ಪರಿಶೀಲನೆಗೆ ಒಳಪಡಿಸಿ ಪ್ರವೇಶವನ್ನು ಪಡೆಯಬಹುದು.
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ…
ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್ನ ಕೊರಿಡಾಂಗ್…
ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…