MLA Srivatsa
ಮೈಸೂರು: ಮುಂದಿನ ಚುನಾವಣೆಯಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಆರ್ಎಸ್ಎಸ್ ಬ್ಯಾನ್ ಮಾಡುತ್ತೇವೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ತಿರುಗೇಟು ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಮಾನಸಿಕ ಸ್ಥಿಮಿತತೆ ಕಳೆದುಕೊಂಡಂತೆ ಮಾತನಾಡುತ್ತಿದ್ದಾರೆ. ಅವರು ಒಂದು ಗಂಟೆ ಆರ್ಎಸ್ಎಸ್ ಶಾಖೆಗೆ ಹೋಗಿ ಬರಲಿ. ಅಲ್ಲಿ ಏನು ನಡೆಯುತ್ತಿದೆ ಎಂಬುದು ಅವರಿಗೆ ಗೊತ್ತಾಗುತ್ತದೆ. ಆರ್ಎಸ್ಎಸ್ ಹೇಗೆ ದೇಶ ದ್ರೋಹಿ ಸಂಘಟನೆ. ಆರ್ಎಸ್ಎಸ್ ಬಗ್ಗೆ ತಿಳುವಳಿಕೆ ಇಲ್ಲದೆ ಪ್ರಿಯಾಂಕ ಖರ್ಗೆ ಮಾತಾಡುತ್ತಿದ್ದಾರೆ.
ಆರ್ಎಸ್ಎಸ್ ಬಗ್ಗೆ ಪ್ರಿಯಾಂಕ ಖರ್ಗೆಗೆ ಏನೂ ಗೊತ್ತಿಲ್ಲ. ಈ ಹಿಂದೆ ಇದೆ ಕಾಂಗ್ರೆಸ್ ಆರ್ಎಸ್ಎಸ್ ಬ್ಯಾನ್ ಮಾಡಿ. ಅದನ್ನು ಮತ್ತೆ ವಾಪಾಸ್ ತೆಗೆದುಕೊಂಡಿತ್ತು. ಆಗ ಪ್ರಿಯಾಂಕ ಖರ್ಗೆ ಶಾಲೆಗೆ ಹೋಗುತ್ತಿದ್ರು. ಹೀಗಾಗಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾನೇ ಪ್ರಿಯಾಂಕ ಖರ್ಗೆ ಮಾತು ನಿಜವಾಗೋದು. ಇನ್ನು ಇಪ್ಪತ್ತು ವರ್ಷ ಕಾಲ ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಅಧಿಕಾರದಲ್ಲಿ ಇರುತ್ತೆ. ಪ್ರಿಯಾಂಕ ಖರ್ಗೆ ಸುಮ್ಮನೆ ಕನಸು ಕಾಣುತ್ತಿದ್ದಾರೆ ಎಂದು ಕಿಡಿಕಾರಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…