ಮೈಸೂರು: ಆರ್ಎಸ್ಎಸ್ ಬ್ಯಾನ್ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆಗೆ ಒಂದು ಹುಚ್ಚು ಚಾಳಿ ಇದೆ. ಪ್ರಿಯಾಂಕ್ ಖರ್ಗೆ ಎಮ್ಮೆ ಮೇಲೆ ಮಳೆ ಬಂದಂತೆ ಆಡ್ತಾರೆ. ಇತ್ತೀಚೆಗೆ ಪ್ರಿಯಾಂಕ್ ಖರ್ಗೆಗೆ ಪ್ರಚಾರದ ಗೀಳು ಜಾಸ್ತಿಯಾಗಿದೆ. ನಾನೊಬ್ಬ ಮಂತ್ರಿ ಎಲ್ಲವನ್ನೂ ಪ್ರಸಾರ ಮಾಡ್ತಾರೆ ಅಂತೆಲ್ಲಾ ಏನು ಬೇಕಾದ್ರೂ ಮಾತನಾಡುತ್ತಾರೆ. ಜವಾಹರ್ ಲಾಲ್ ನೆಹರೂ ಕೈನಲ್ಲಿ ಆರ್ಎಸ್ಎಸ್ ಬ್ಯಾನ್ ಮಾಡೋಕೆ ಆಗಲಿಲ್ಲ. ಇಂದಿರಾಗಾಂಧಿ ಕೈನಲ್ಲಿ ಆಗಲಿಲ್ಲ. ರಾಜೀವ್ ಗಾಂಧಿ ಕೈನಲ್ಲಿ ಆಗಲಿಲ್ಲ. ನಿಮ್ಮ ಕೈನಲ್ಲಿ ಆರ್ಎಸ್ಎಸ್ ಬ್ಯಾನ್ ಮಾಡೋಕೆ ಆಗುತ್ತಾ ಎಂದು ಕಿಡಿಕಾರಿದರು.
ಇದನ್ನು ಓದಿ : ಆರ್ಎಸ್ಎಸ್ಗೆ 100 ವರ್ಷ ತುಂಬಿದ ಬೆನ್ನಲ್ಲೇ ಬಿಗ್ ಶಾಕ್: ಏನದು ಗೊತ್ತಾ?
ಇನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರೇ ನಿಮಗೆ ರಾಜ್ಯದಲ್ಲಿ ಯಾವುದೇ ಮನ್ನಣೆ ಇಲ್ಲ. ಕಲಬುರಗಿ ಅಭಿವೃದ್ಧಿ ಮಾಡಲು ಆಗದ ನೀವು ಎಷ್ಟು ಮಾತನಾಡುತ್ತೀರಾ? ಮೊನ್ನೆ ಕಲಬುರ್ಗಿ ಹೆಣ್ಣು ಮಗು ಹತ್ಯೆ ಆಯ್ತು, ಅದರ ಬಗ್ಗೆ ಮಾತನಾಡಿಲ್ಲ. ಅದೆಷ್ಟೋ ಜನರು ನಮಗೆ ಕಲಬುರ್ಗಿಯಲ್ಲಿ ಆಧಾರ್ ಕಾರ್ಡ್ ಸಿಗ್ತಾ ಇಲ್ಲ ಅಂತಾರೆ. ಅದರ ಬಗ್ಗೆಯೂ ಎಲ್ಲೂ ಮಾತಾಡಿಲ್ಲ. ಅಧಿಕಾರಕ್ಕೆ ಬರುವ ಮೊದಲು, ಬಿಟ್ ಕಾಯಿನ್ ಹಗರಣದ ಬಗ್ಗೆ ಏನೆಲ್ಲಾ ಮಾತನಾಡಿದರು? ಈಗ ಅದರ ಬಗ್ಗೆ ಚಕಾರ ಎತ್ತುತ್ತಿಲ್ಲ. ನೀವು ಕೂಡ ಪಿಯುಸಿ ಫೇಲ್ ಆಗಿರೋರು. ನಿಮ್ಮ ಜಿಲ್ಲೆ ಎಸ್ಎಸ್ಎಲ್ಸಿ ರಿಸಲ್ಟ್ ನಲ್ಲಿ ಕೋಣೆಯಲ್ಲಿ ಇರುತ್ತೆ. ಸಚಿವರಾಗಿ ನಿಮ್ಮ ಜಿಲ್ಲೆಗೆ ಕೊಡುಗೆ ಏನು ಸರ್? ಆರ್ಎಸ್ಎಸ್ ಬಗ್ಗೆ ಮಾತನಾಡುವ ನೀವು ಏನು ಬದಲಾವಣೆ ತಂದಿದ್ದೀರಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…