sudharshan
ಮೈಸೂರು: ಕನ್ನಡ ಪರ ಹೋರಾಟಗಾರ ಹಾಗೂ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯ ಸ್ಥಾಪಕರಲ್ಲೊಬ್ಬರಾದ ಸ.ರ.ಸುದರ್ಶನ್ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಸ.ರ.ಸುದರ್ಶನ್ ಅವರು ವಿಜಯನಗರದ ತಮ್ಮ ಮನೆಯಲ್ಲಿ ಇಂದು ಬೆಳಿಗ್ಗೆ ಸುಮಾರು 8 ಗಂಟೆಯ ಸಮಯದಲ್ಲಿ ನಿಧನರಾದರು ಅವರಿಗೆ ಒಬ್ಬರೇ ಪುತ್ರಿ ಎಂಜಿನಿಯರ್ ಹಾಗೂ ರಂಗ ಕಲಾವಿದೆ ನುಡಿ ಸುದರ್ಶನ್ ಇದ್ದಾರೆ.
ಐವತ್ತು ವರ್ಷಗಳ ಹಿಂದೆಯೇ ಮೊದಲ ಬಾರಿಗೆ ಕನ್ನಡ ಚಳುವಳಿಯಲ್ಲಿ ಸುದರ್ಶನ್ ಪಾಲ್ಗೊಂಡಿದ್ದರು. ಅಂದಿನಿಂದ ಇಂದಿನವರೆಗೆ ಸತತವಾಗಿ ಕನ್ನಡ ಚಳುವಳಿಯಲ್ಲಿ ಭಾಗಿಯಾಗಿದ್ದ ಅವರು, ಎಂಭತ್ತರ ದಶಕದಲ್ಲಿ ಪ್ರಾರಂಭವಾದ ಗೋಕಾಕ್ ಚಳುವಳಿಯಲ್ಲಿ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಆರಂಭದಿಂದಲೂ ಭಾಗಿಯಾಗಿದ್ದರು. ಕನ್ನಡ ಕ್ರಿಯಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಂದು ಆಯ್ಕೆಯಾಗಿ ಇಂದಿನವರೆಗೂ ಮುಂದುವರಿದಿದ್ದರು.
ಸರ್ಕಾರದ ವತಿಯಿಂದ ಕನ್ನಡಕ್ಕೆ ಕುತ್ತು ಬಂದ ಬಹುತೇಕ ಸಂದರ್ಭಗಳಲ್ಲಿ ಹೋರಾಟ ಮಾಡಿದ್ದ ಅವರು, ಹಲವಾರು ಧರಣಿಗಳು, ಪ್ರತಿಭಟನೆಗಳಲ್ಲಿ ಭಾಗಿಯಾಗಿ, ಹಲವು ಬಾರಿ ಬಂಧನವಾಗಿ ಬಿಡುಗಡೆಯಾಗಿದ್ದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…