sudharshan
ಮೈಸೂರು: ಕನ್ನಡ ಪರ ಹೋರಾಟಗಾರ ಹಾಗೂ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯ ಸ್ಥಾಪಕರಲ್ಲೊಬ್ಬರಾದ ಸ.ರ.ಸುದರ್ಶನ್ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಸ.ರ.ಸುದರ್ಶನ್ ಅವರು ವಿಜಯನಗರದ ತಮ್ಮ ಮನೆಯಲ್ಲಿ ಇಂದು ಬೆಳಿಗ್ಗೆ ಸುಮಾರು 8 ಗಂಟೆಯ ಸಮಯದಲ್ಲಿ ನಿಧನರಾದರು ಅವರಿಗೆ ಒಬ್ಬರೇ ಪುತ್ರಿ ಎಂಜಿನಿಯರ್ ಹಾಗೂ ರಂಗ ಕಲಾವಿದೆ ನುಡಿ ಸುದರ್ಶನ್ ಇದ್ದಾರೆ.
ಐವತ್ತು ವರ್ಷಗಳ ಹಿಂದೆಯೇ ಮೊದಲ ಬಾರಿಗೆ ಕನ್ನಡ ಚಳುವಳಿಯಲ್ಲಿ ಸುದರ್ಶನ್ ಪಾಲ್ಗೊಂಡಿದ್ದರು. ಅಂದಿನಿಂದ ಇಂದಿನವರೆಗೆ ಸತತವಾಗಿ ಕನ್ನಡ ಚಳುವಳಿಯಲ್ಲಿ ಭಾಗಿಯಾಗಿದ್ದ ಅವರು, ಎಂಭತ್ತರ ದಶಕದಲ್ಲಿ ಪ್ರಾರಂಭವಾದ ಗೋಕಾಕ್ ಚಳುವಳಿಯಲ್ಲಿ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಆರಂಭದಿಂದಲೂ ಭಾಗಿಯಾಗಿದ್ದರು. ಕನ್ನಡ ಕ್ರಿಯಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಂದು ಆಯ್ಕೆಯಾಗಿ ಇಂದಿನವರೆಗೂ ಮುಂದುವರಿದಿದ್ದರು.
ಸರ್ಕಾರದ ವತಿಯಿಂದ ಕನ್ನಡಕ್ಕೆ ಕುತ್ತು ಬಂದ ಬಹುತೇಕ ಸಂದರ್ಭಗಳಲ್ಲಿ ಹೋರಾಟ ಮಾಡಿದ್ದ ಅವರು, ಹಲವಾರು ಧರಣಿಗಳು, ಪ್ರತಿಭಟನೆಗಳಲ್ಲಿ ಭಾಗಿಯಾಗಿ, ಹಲವು ಬಾರಿ ಬಂಧನವಾಗಿ ಬಿಡುಗಡೆಯಾಗಿದ್ದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…