sudharshan
ಮೈಸೂರು: ಕನ್ನಡ ಪರ ಹೋರಾಟಗಾರ ಹಾಗೂ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯ ಸ್ಥಾಪಕರಲ್ಲೊಬ್ಬರಾದ ಸ.ರ.ಸುದರ್ಶನ್ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಸ.ರ.ಸುದರ್ಶನ್ ಅವರು ವಿಜಯನಗರದ ತಮ್ಮ ಮನೆಯಲ್ಲಿ ಇಂದು ಬೆಳಿಗ್ಗೆ ಸುಮಾರು 8 ಗಂಟೆಯ ಸಮಯದಲ್ಲಿ ನಿಧನರಾದರು ಅವರಿಗೆ ಒಬ್ಬರೇ ಪುತ್ರಿ ಎಂಜಿನಿಯರ್ ಹಾಗೂ ರಂಗ ಕಲಾವಿದೆ ನುಡಿ ಸುದರ್ಶನ್ ಇದ್ದಾರೆ.
ಐವತ್ತು ವರ್ಷಗಳ ಹಿಂದೆಯೇ ಮೊದಲ ಬಾರಿಗೆ ಕನ್ನಡ ಚಳುವಳಿಯಲ್ಲಿ ಸುದರ್ಶನ್ ಪಾಲ್ಗೊಂಡಿದ್ದರು. ಅಂದಿನಿಂದ ಇಂದಿನವರೆಗೆ ಸತತವಾಗಿ ಕನ್ನಡ ಚಳುವಳಿಯಲ್ಲಿ ಭಾಗಿಯಾಗಿದ್ದ ಅವರು, ಎಂಭತ್ತರ ದಶಕದಲ್ಲಿ ಪ್ರಾರಂಭವಾದ ಗೋಕಾಕ್ ಚಳುವಳಿಯಲ್ಲಿ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಆರಂಭದಿಂದಲೂ ಭಾಗಿಯಾಗಿದ್ದರು. ಕನ್ನಡ ಕ್ರಿಯಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಂದು ಆಯ್ಕೆಯಾಗಿ ಇಂದಿನವರೆಗೂ ಮುಂದುವರಿದಿದ್ದರು.
ಸರ್ಕಾರದ ವತಿಯಿಂದ ಕನ್ನಡಕ್ಕೆ ಕುತ್ತು ಬಂದ ಬಹುತೇಕ ಸಂದರ್ಭಗಳಲ್ಲಿ ಹೋರಾಟ ಮಾಡಿದ್ದ ಅವರು, ಹಲವಾರು ಧರಣಿಗಳು, ಪ್ರತಿಭಟನೆಗಳಲ್ಲಿ ಭಾಗಿಯಾಗಿ, ಹಲವು ಬಾರಿ ಬಂಧನವಾಗಿ ಬಿಡುಗಡೆಯಾಗಿದ್ದರು.
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…