sudharshan
ಮೈಸೂರು: ಕನ್ನಡ ಪರ ಹೋರಾಟಗಾರ ಹಾಗೂ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯ ಸ್ಥಾಪಕರಲ್ಲೊಬ್ಬರಾದ ಸ.ರ.ಸುದರ್ಶನ್ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಸ.ರ.ಸುದರ್ಶನ್ ಅವರು ವಿಜಯನಗರದ ತಮ್ಮ ಮನೆಯಲ್ಲಿ ಇಂದು ಬೆಳಿಗ್ಗೆ ಸುಮಾರು 8 ಗಂಟೆಯ ಸಮಯದಲ್ಲಿ ನಿಧನರಾದರು ಅವರಿಗೆ ಒಬ್ಬರೇ ಪುತ್ರಿ ಎಂಜಿನಿಯರ್ ಹಾಗೂ ರಂಗ ಕಲಾವಿದೆ ನುಡಿ ಸುದರ್ಶನ್ ಇದ್ದಾರೆ.
ಐವತ್ತು ವರ್ಷಗಳ ಹಿಂದೆಯೇ ಮೊದಲ ಬಾರಿಗೆ ಕನ್ನಡ ಚಳುವಳಿಯಲ್ಲಿ ಸುದರ್ಶನ್ ಪಾಲ್ಗೊಂಡಿದ್ದರು. ಅಂದಿನಿಂದ ಇಂದಿನವರೆಗೆ ಸತತವಾಗಿ ಕನ್ನಡ ಚಳುವಳಿಯಲ್ಲಿ ಭಾಗಿಯಾಗಿದ್ದ ಅವರು, ಎಂಭತ್ತರ ದಶಕದಲ್ಲಿ ಪ್ರಾರಂಭವಾದ ಗೋಕಾಕ್ ಚಳುವಳಿಯಲ್ಲಿ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಆರಂಭದಿಂದಲೂ ಭಾಗಿಯಾಗಿದ್ದರು. ಕನ್ನಡ ಕ್ರಿಯಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಂದು ಆಯ್ಕೆಯಾಗಿ ಇಂದಿನವರೆಗೂ ಮುಂದುವರಿದಿದ್ದರು.
ಸರ್ಕಾರದ ವತಿಯಿಂದ ಕನ್ನಡಕ್ಕೆ ಕುತ್ತು ಬಂದ ಬಹುತೇಕ ಸಂದರ್ಭಗಳಲ್ಲಿ ಹೋರಾಟ ಮಾಡಿದ್ದ ಅವರು, ಹಲವಾರು ಧರಣಿಗಳು, ಪ್ರತಿಭಟನೆಗಳಲ್ಲಿ ಭಾಗಿಯಾಗಿ, ಹಲವು ಬಾರಿ ಬಂಧನವಾಗಿ ಬಿಡುಗಡೆಯಾಗಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…