Kannada organizations
ಮೈಸೂರು: ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಕಾಲಿವುಡ್ ನಟ ಕಮಲ್ ಹಾಸನ್ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ಕನ್ನಡಿಗರ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿವೆ.
ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾಯಿಸಿದ ಕನ್ನಡಪರ ಸಂಘಟನೆ ಕಾರ್ಯಕರ್ತರು, ಕಮಲ್ ಹಾಸನ್ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ತಮಿಳಿನಿಂದ ಕನ್ನಡ ಹುಟ್ಟಿಲ್ಲ. ಕನ್ನಡದಲ್ಲಿ 52 ಅಕ್ಷರಗಳಿವೆ. ತಮಿಳಿನಲ್ಲಿ ಕೇವಲ 18 ಅಕ್ಷರಗಳಿವೆ. ಕನ್ನಡ ತನ್ನದೇ ಆದ ಇತಿಹಾಸ ಹೊಂದಿದೆ. ನಿಮ್ಮ ತಮಿಳಿನಿಂದ ನಮ್ಮ ಕನ್ನಡ ಹುಟ್ಟಿಲ್ಲ. ಈ ಕೂಡಲೇ ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲ ಅಂದರೆ ಅವರ ಥಗ್ ಲೈನ್ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜಸ್ ಲೋಕೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಮಂದಿ ಭಾಗಿಯಾಗಿದ್ದರು
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…