ಮೈಸೂರು ನಗರ

ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ವಿರುದ್ಧ ಸಿಡಿದೆದ್ದ ಕನ್ನಡಪರ ಸಂಘಟನೆಗಳು

ಮೈಸೂರು: ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಕಾಲಿವುಡ್‌ ನಟ ಕಮಲ್‌ ಹಾಸನ್‌ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ಕನ್ನಡಿಗರ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿವೆ.

ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾಯಿಸಿದ ಕನ್ನಡಪರ ಸಂಘಟನೆ ಕಾರ್ಯಕರ್ತರು, ಕಮಲ್‌ ಹಾಸನ್‌ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ತಮಿಳಿನಿಂದ ಕನ್ನಡ ಹುಟ್ಟಿಲ್ಲ. ಕನ್ನಡದಲ್ಲಿ 52 ಅಕ್ಷರಗಳಿವೆ. ತಮಿಳಿನಲ್ಲಿ ಕೇವಲ 18 ಅಕ್ಷರಗಳಿವೆ. ಕನ್ನಡ ತನ್ನದೇ ಆದ ಇತಿಹಾಸ ಹೊಂದಿದೆ. ನಿಮ್ಮ ತಮಿಳಿನಿಂದ ನಮ್ಮ ಕನ್ನಡ ಹುಟ್ಟಿಲ್ಲ‌. ಈ ಕೂಡಲೇ ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲ ಅಂದರೆ ಅವರ ಥಗ್ ಲೈನ್ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜಸ್ ಲೋಕೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಮಂದಿ ಭಾಗಿಯಾಗಿದ್ದರು

ಆಂದೋಲನ ಡೆಸ್ಕ್

Recent Posts

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

14 mins ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

2 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

2 hours ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

3 hours ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

4 hours ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

4 hours ago