ಮೈಸೂರು: ನಗರದ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕಿಯಾಗಿ ನಿವೃತ್ತರಾಗಿದ್ದ ಮಂಜುಳಾ ಬಿ.ಸಿ. (65) ಬಹು ಅಂಗಾಂಗ ವೈಫಲ್ಯದಿಂದ ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು.
ಮಹಿಳಾ ಸಂಘಟನೆಯಲ್ಲಿ ಕ್ರಿಯಾಶೀಲರಾಗಿದ್ದ ಅವರಿಗೆ ಪತಿ ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ರಾಜಪ್ಪ ದಳವಾಯಿ ಹಾಗೂ ಮಗ ಮೇಜರ್ ಭಾರತಿ ನಂದ ಇದ್ದಾರೆ.
ಹಾಸನ ಸಮೀಪದ ಬುಸ್ತೇನಹಳ್ಳಿಯಲ್ಲಿ ಜನಿಸಿದ ಅವರು ವಿದ್ಯಾಭ್ಯಾಸಕ್ಕಾಗಿ ಕೂಡ ಹೋರಾಟ ಮಾಡಬೇಕಾದ ಪರಿಸ್ಥಿತಿಯನ್ನು ಎದುರಿಸಿದ್ದರು. ಅನಂತರ ಮೈಸೂರಿನಲ್ಲಿ ಕನ್ನಡ ಎಂ.ಎ ಮುಗಿಸಿ ಕನ್ನಡ ಅಧ್ಯಾಪಕರಾಗಿ ಸೇರಿಕೊಂಡರು.
ಅನೇಕ ವಿಚಾರ ಸಂಕಿರಣಗಳಲ್ಲಿ ಪ್ರಬಂಧಗಳನ್ನು ಮಂಡಿಸಿದ್ದ ಅವರು, ಅನೇಕ ಲೇಖನಗಳನ್ನು ಕೂಡ ಬರೆದಿದ್ದಾರೆ. ನಾಸ್ತಿಕರಾಗಿದ್ದ ಅವರು, ಶುಷ್ಕ ಆಚರಣೆಗಿಂತ ಹೆಣ್ಣಿಗೆ ವಿದ್ಯೆ ಮುಖ್ಯ ಎಂದು ನಂಬಿದ್ದರು.
ಬುಧವಾರ (ಏಪ್ರಿಲ್ 16) ಬೆಳಿಗ್ಗೆ 8 ಗಂಟೆಗೆ ಮೈಸೂರಿನ ಅವರ ಸ್ವಗೃಹದಲ್ಲಿ (ಬೋಗಾದಿ ದಕ್ಷಿಣ ಎರಡನೇ ಹಂತ, ವಾಗ್ದೇವಿನಗರ, ಎಸ್.ಜೆ.ಸಿ.ಇ. ಮುಖ್ಯರಸ್ತೆ) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಂತರ ಚಾಮುಂಡಿ ಬೆಟ್ಟದ ತಪ್ಪಲಿನ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…
ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…
ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ…
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…