ಮೈಸೂರು ನಗರ

ಮೈಸೂರು| ಪ್ರೊ.ರಾಜಪ್ಪ ದಳವಾಯಿ ಪತ್ನಿ ಮಂಜುಳಾ ಬಿ.ಸಿ. ನಿಧನ

ಮೈಸೂರು: ನಗರದ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕಿಯಾಗಿ ನಿವೃತ್ತರಾಗಿದ್ದ ಮಂಜುಳಾ ಬಿ.ಸಿ. (65) ಬಹು ಅಂಗಾಂಗ ವೈಫಲ್ಯದಿಂದ ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು.

ಮಹಿಳಾ ಸಂಘಟನೆಯಲ್ಲಿ ಕ್ರಿಯಾಶೀಲರಾಗಿದ್ದ ಅವರಿಗೆ ಪತಿ ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ರಾಜಪ್ಪ ದಳವಾಯಿ ಹಾಗೂ ಮಗ ಮೇಜರ್ ಭಾರತಿ ನಂದ ಇದ್ದಾರೆ.

ಹಾಸನ ಸಮೀಪದ ಬುಸ್ತೇನಹಳ್ಳಿಯಲ್ಲಿ ಜನಿಸಿದ ಅವರು ವಿದ್ಯಾಭ್ಯಾಸಕ್ಕಾಗಿ ಕೂಡ ಹೋರಾಟ ಮಾಡಬೇಕಾದ ಪರಿಸ್ಥಿತಿಯನ್ನು ಎದುರಿಸಿದ್ದರು. ಅನಂತರ ಮೈಸೂರಿನಲ್ಲಿ ಕನ್ನಡ ಎಂ.ಎ ಮುಗಿಸಿ ಕನ್ನಡ ಅಧ್ಯಾಪಕರಾಗಿ ಸೇರಿಕೊಂಡರು.

ಅನೇಕ ವಿಚಾರ ಸಂಕಿರಣಗಳಲ್ಲಿ ಪ್ರಬಂಧಗಳನ್ನು ಮಂಡಿಸಿದ್ದ ಅವರು, ಅನೇಕ ಲೇಖನಗಳನ್ನು ಕೂಡ ಬರೆದಿದ್ದಾರೆ. ನಾಸ್ತಿಕರಾಗಿದ್ದ ಅವರು, ಶುಷ್ಕ ಆಚರಣೆಗಿಂತ ಹೆಣ್ಣಿಗೆ ವಿದ್ಯೆ ಮುಖ್ಯ ಎಂದು ನಂಬಿದ್ದರು.

ಬುಧವಾರ (ಏಪ್ರಿಲ್ 16) ಬೆಳಿಗ್ಗೆ 8 ಗಂಟೆಗೆ ಮೈಸೂರಿನ ಅವರ ಸ್ವಗೃಹದಲ್ಲಿ (ಬೋಗಾದಿ ದಕ್ಷಿಣ ಎರಡನೇ ಹಂತ, ವಾಗ್ದೇವಿನಗರ, ಎಸ್.ಜೆ.ಸಿ.ಇ. ಮುಖ್ಯರಸ್ತೆ) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಂತರ ಚಾಮುಂಡಿ ಬೆಟ್ಟದ ತಪ್ಪಲಿನ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಕ್ರೀಡಾಲೋಕದ ಸಿಹಿ-ಕಹಿ ಮೆಲುಕು

ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…

32 mins ago

ಕೊಡಗು ಜಿಲ್ಲೆಯಲ್ಲಿ ಹೆಚ್ಚಿದ ಮಂಗಗಳ ಕಾಟ

* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ  ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…

1 hour ago

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

3 hours ago

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…

3 hours ago

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…

3 hours ago

ಗುಬ್ಬಚ್ಚಿ ಶಾಲೆಯಲ್ಲಿ ಬರೀ 12 ವಿದ್ಯಾರ್ಥಿಗಳು!

ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…

4 hours ago