ಮೈಸೂರು: ನಗರದ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕಿಯಾಗಿ ನಿವೃತ್ತರಾಗಿದ್ದ ಮಂಜುಳಾ ಬಿ.ಸಿ. (65) ಬಹು ಅಂಗಾಂಗ ವೈಫಲ್ಯದಿಂದ ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು.
ಮಹಿಳಾ ಸಂಘಟನೆಯಲ್ಲಿ ಕ್ರಿಯಾಶೀಲರಾಗಿದ್ದ ಅವರಿಗೆ ಪತಿ ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ರಾಜಪ್ಪ ದಳವಾಯಿ ಹಾಗೂ ಮಗ ಮೇಜರ್ ಭಾರತಿ ನಂದ ಇದ್ದಾರೆ.
ಹಾಸನ ಸಮೀಪದ ಬುಸ್ತೇನಹಳ್ಳಿಯಲ್ಲಿ ಜನಿಸಿದ ಅವರು ವಿದ್ಯಾಭ್ಯಾಸಕ್ಕಾಗಿ ಕೂಡ ಹೋರಾಟ ಮಾಡಬೇಕಾದ ಪರಿಸ್ಥಿತಿಯನ್ನು ಎದುರಿಸಿದ್ದರು. ಅನಂತರ ಮೈಸೂರಿನಲ್ಲಿ ಕನ್ನಡ ಎಂ.ಎ ಮುಗಿಸಿ ಕನ್ನಡ ಅಧ್ಯಾಪಕರಾಗಿ ಸೇರಿಕೊಂಡರು.
ಅನೇಕ ವಿಚಾರ ಸಂಕಿರಣಗಳಲ್ಲಿ ಪ್ರಬಂಧಗಳನ್ನು ಮಂಡಿಸಿದ್ದ ಅವರು, ಅನೇಕ ಲೇಖನಗಳನ್ನು ಕೂಡ ಬರೆದಿದ್ದಾರೆ. ನಾಸ್ತಿಕರಾಗಿದ್ದ ಅವರು, ಶುಷ್ಕ ಆಚರಣೆಗಿಂತ ಹೆಣ್ಣಿಗೆ ವಿದ್ಯೆ ಮುಖ್ಯ ಎಂದು ನಂಬಿದ್ದರು.
ಬುಧವಾರ (ಏಪ್ರಿಲ್ 16) ಬೆಳಿಗ್ಗೆ 8 ಗಂಟೆಗೆ ಮೈಸೂರಿನ ಅವರ ಸ್ವಗೃಹದಲ್ಲಿ (ಬೋಗಾದಿ ದಕ್ಷಿಣ ಎರಡನೇ ಹಂತ, ವಾಗ್ದೇವಿನಗರ, ಎಸ್.ಜೆ.ಸಿ.ಇ. ಮುಖ್ಯರಸ್ತೆ) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಂತರ ಚಾಮುಂಡಿ ಬೆಟ್ಟದ ತಪ್ಪಲಿನ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…