ಮೈಸೂರು ನಗರ

ದೇಶದ ಆರ್ಥಿಕ ಬೆಳವಣಿಗೆಗೆ ವಿಶ್ವವಿದ್ಯಾನಿಲಯಗಳ ಪಾತ್ರ ಮಹತ್ವದ್ದಾಗಿದೆ: ಪ್ರೊ.ಟಿ.ಪಿ.ಸಿಂಗ್‌

ಮೈಸೂರು: ವಿಕಸಿತ ಭಾರತ-2047ರ ಗುರಿ ಸಾಧಿಸುವ ಸಲುವಾಗಿ ದೇಶದ ಆರ್ಥಿಕ ಬೆಳವಣಿಗೆಗೆ ವಿಶ್ವವಿದ್ಯಾನಿಲಯಗಳ ಪಾತ್ರ ಮಹತ್ವದ್ದಾಗಿದೆ ಎಂದು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಪ್ರೊ.ಟಿ.ಪಿ.ಸಿಂಗ್‌ ತಿಳಿಸಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್‌ ಭವನದಲ್ಲಿ ಇಂದು(ಜನವರಿ.18) ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಷಣ ಮಾಡಿದ ಅವರು, ವಿಶ್ವವಿದ್ಯಾನಿಲಯಗಳಲ್ಲಿ ಮೂಲ ಸೌಲಭ್ಯಗಳ ವೃದ್ಧಿ ಹಾಗೂ ಭೋಧಕರ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಸೂಕ್ತ ಕ್ರಮ ವಹಿಸಬೇಕು. ಅಗತ್ಯ ಮಾನವ ಸಂಪನ್ಮೂಲಕ್ಕೆ ಗುಣಮಟ್ಟದ ಮತ್ತು ಪರಿಣಾಮಕಾರಿ ತರಬೇತಿ ನೀಡಿ ಸದುಪಯೋಗ ಪಡೆದುಕೊಳ್ಳಬೇಕು. ಅಲ್ಲದೇ ಇದರ ಲಾಭ ದೇಶದ ಪ್ರಗತಿಗೆ ಲಭ್ಯವಾಗುವಂತೆಯೂ ನೋಡಿಕೊಳ್ಳಬೇಕು ಎಂದು ಹೇಳಿದರು.

ಪ್ರಸ್ತುತ ವಿದ್ಯಮಾನದಲ್ಲಿ ಅಮೆರಿಕ ಸೇರಿದಂತೆ ಪ್ರಪಂಚದ ನಾನಾ ಕಡೆಗಳಲ್ಲಿ ಹಲವು ಅತ್ಯಾಧುನಿಕ ಕಂಪೆನಿಗಳ ನೇತೃತ್ವದನ್ನು ಭಾರತೀಯರೇ ವಹಿಸಿದ್ದು, ನಮ್ಮ ದೇಶದ ಗುಣಮಟ್ಟ ಹಾಗೂ ಸಾಮರ್ಥ್ಯವನ್ನು ತೋರಿಸುತ್ತದೆ. ಹೀಗಾಗಿ ವಿಶ್ವವಿದ್ಯಾನಿಲಯಗಳನ್ನು ಬಲವರ್ಧನೆಗೊಳಿಸಬೇಕು. ಅದರ ಜೊತೆಗೆ ವಿಶ್ವವಿದ್ಯಾನಿಲಯಗಳಿಗೆ ಅನುದಾನವನ್ನು ನೀಡಬೇಕು ಎಂದರು.

ವಿಶ್ವದಲ್ಲಿ ಪ್ರಸ್ತುತವಾಗಿ ಅನೇಕ ಅವಕಾಶಗಳ ಸಾಧ್ಯತೆಗಳನ್ನು ತೆರೆಯಲು ಸಿದ್ಧವಾಗಿದೆ. ಅದಕ್ಕೆ ತಕ್ಕಂತೆ ಪದವೀಧರರು ಸಜ್ಜಾಗಬೇಕು. ಪದವೀಧರರಲ್ಲಿ ಈಗ ಹಿಂದಿಗಿಂತಲೂ ಜ್ಞಾನ ಮತ್ತು ಕೌಶಲ್ಯಕ್ಕೆ ಅಧಿಕ ಗೌರವ ಲಭ್ಯವಾಗುತ್ತಿದೆ. ಜೊತೆಗೆ ಕೌಶಲ ಹೊಂದಿರುವವರಿಗೆ ಪುರಸ್ಕಾರ ದೊರೆಯುತ್ತಿದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

12 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

14 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

16 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

16 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

22 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

22 hours ago