ಮೈಸೂರು ನಗರ

ದೇಶದ ಆರ್ಥಿಕ ಬೆಳವಣಿಗೆಗೆ ವಿಶ್ವವಿದ್ಯಾನಿಲಯಗಳ ಪಾತ್ರ ಮಹತ್ವದ್ದಾಗಿದೆ: ಪ್ರೊ.ಟಿ.ಪಿ.ಸಿಂಗ್‌

ಮೈಸೂರು: ವಿಕಸಿತ ಭಾರತ-2047ರ ಗುರಿ ಸಾಧಿಸುವ ಸಲುವಾಗಿ ದೇಶದ ಆರ್ಥಿಕ ಬೆಳವಣಿಗೆಗೆ ವಿಶ್ವವಿದ್ಯಾನಿಲಯಗಳ ಪಾತ್ರ ಮಹತ್ವದ್ದಾಗಿದೆ ಎಂದು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಪ್ರೊ.ಟಿ.ಪಿ.ಸಿಂಗ್‌ ತಿಳಿಸಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್‌ ಭವನದಲ್ಲಿ ಇಂದು(ಜನವರಿ.18) ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಷಣ ಮಾಡಿದ ಅವರು, ವಿಶ್ವವಿದ್ಯಾನಿಲಯಗಳಲ್ಲಿ ಮೂಲ ಸೌಲಭ್ಯಗಳ ವೃದ್ಧಿ ಹಾಗೂ ಭೋಧಕರ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಸೂಕ್ತ ಕ್ರಮ ವಹಿಸಬೇಕು. ಅಗತ್ಯ ಮಾನವ ಸಂಪನ್ಮೂಲಕ್ಕೆ ಗುಣಮಟ್ಟದ ಮತ್ತು ಪರಿಣಾಮಕಾರಿ ತರಬೇತಿ ನೀಡಿ ಸದುಪಯೋಗ ಪಡೆದುಕೊಳ್ಳಬೇಕು. ಅಲ್ಲದೇ ಇದರ ಲಾಭ ದೇಶದ ಪ್ರಗತಿಗೆ ಲಭ್ಯವಾಗುವಂತೆಯೂ ನೋಡಿಕೊಳ್ಳಬೇಕು ಎಂದು ಹೇಳಿದರು.

ಪ್ರಸ್ತುತ ವಿದ್ಯಮಾನದಲ್ಲಿ ಅಮೆರಿಕ ಸೇರಿದಂತೆ ಪ್ರಪಂಚದ ನಾನಾ ಕಡೆಗಳಲ್ಲಿ ಹಲವು ಅತ್ಯಾಧುನಿಕ ಕಂಪೆನಿಗಳ ನೇತೃತ್ವದನ್ನು ಭಾರತೀಯರೇ ವಹಿಸಿದ್ದು, ನಮ್ಮ ದೇಶದ ಗುಣಮಟ್ಟ ಹಾಗೂ ಸಾಮರ್ಥ್ಯವನ್ನು ತೋರಿಸುತ್ತದೆ. ಹೀಗಾಗಿ ವಿಶ್ವವಿದ್ಯಾನಿಲಯಗಳನ್ನು ಬಲವರ್ಧನೆಗೊಳಿಸಬೇಕು. ಅದರ ಜೊತೆಗೆ ವಿಶ್ವವಿದ್ಯಾನಿಲಯಗಳಿಗೆ ಅನುದಾನವನ್ನು ನೀಡಬೇಕು ಎಂದರು.

ವಿಶ್ವದಲ್ಲಿ ಪ್ರಸ್ತುತವಾಗಿ ಅನೇಕ ಅವಕಾಶಗಳ ಸಾಧ್ಯತೆಗಳನ್ನು ತೆರೆಯಲು ಸಿದ್ಧವಾಗಿದೆ. ಅದಕ್ಕೆ ತಕ್ಕಂತೆ ಪದವೀಧರರು ಸಜ್ಜಾಗಬೇಕು. ಪದವೀಧರರಲ್ಲಿ ಈಗ ಹಿಂದಿಗಿಂತಲೂ ಜ್ಞಾನ ಮತ್ತು ಕೌಶಲ್ಯಕ್ಕೆ ಅಧಿಕ ಗೌರವ ಲಭ್ಯವಾಗುತ್ತಿದೆ. ಜೊತೆಗೆ ಕೌಶಲ ಹೊಂದಿರುವವರಿಗೆ ಪುರಸ್ಕಾರ ದೊರೆಯುತ್ತಿದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

6 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

6 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

6 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

8 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

8 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

9 hours ago