ಮೈಸೂರು ನಗರ

ದೇಶದ ಆರ್ಥಿಕ ಬೆಳವಣಿಗೆಗೆ ವಿಶ್ವವಿದ್ಯಾನಿಲಯಗಳ ಪಾತ್ರ ಮಹತ್ವದ್ದಾಗಿದೆ: ಪ್ರೊ.ಟಿ.ಪಿ.ಸಿಂಗ್‌

ಮೈಸೂರು: ವಿಕಸಿತ ಭಾರತ-2047ರ ಗುರಿ ಸಾಧಿಸುವ ಸಲುವಾಗಿ ದೇಶದ ಆರ್ಥಿಕ ಬೆಳವಣಿಗೆಗೆ ವಿಶ್ವವಿದ್ಯಾನಿಲಯಗಳ ಪಾತ್ರ ಮಹತ್ವದ್ದಾಗಿದೆ ಎಂದು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಪ್ರೊ.ಟಿ.ಪಿ.ಸಿಂಗ್‌ ತಿಳಿಸಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್‌ ಭವನದಲ್ಲಿ ಇಂದು(ಜನವರಿ.18) ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಷಣ ಮಾಡಿದ ಅವರು, ವಿಶ್ವವಿದ್ಯಾನಿಲಯಗಳಲ್ಲಿ ಮೂಲ ಸೌಲಭ್ಯಗಳ ವೃದ್ಧಿ ಹಾಗೂ ಭೋಧಕರ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಸೂಕ್ತ ಕ್ರಮ ವಹಿಸಬೇಕು. ಅಗತ್ಯ ಮಾನವ ಸಂಪನ್ಮೂಲಕ್ಕೆ ಗುಣಮಟ್ಟದ ಮತ್ತು ಪರಿಣಾಮಕಾರಿ ತರಬೇತಿ ನೀಡಿ ಸದುಪಯೋಗ ಪಡೆದುಕೊಳ್ಳಬೇಕು. ಅಲ್ಲದೇ ಇದರ ಲಾಭ ದೇಶದ ಪ್ರಗತಿಗೆ ಲಭ್ಯವಾಗುವಂತೆಯೂ ನೋಡಿಕೊಳ್ಳಬೇಕು ಎಂದು ಹೇಳಿದರು.

ಪ್ರಸ್ತುತ ವಿದ್ಯಮಾನದಲ್ಲಿ ಅಮೆರಿಕ ಸೇರಿದಂತೆ ಪ್ರಪಂಚದ ನಾನಾ ಕಡೆಗಳಲ್ಲಿ ಹಲವು ಅತ್ಯಾಧುನಿಕ ಕಂಪೆನಿಗಳ ನೇತೃತ್ವದನ್ನು ಭಾರತೀಯರೇ ವಹಿಸಿದ್ದು, ನಮ್ಮ ದೇಶದ ಗುಣಮಟ್ಟ ಹಾಗೂ ಸಾಮರ್ಥ್ಯವನ್ನು ತೋರಿಸುತ್ತದೆ. ಹೀಗಾಗಿ ವಿಶ್ವವಿದ್ಯಾನಿಲಯಗಳನ್ನು ಬಲವರ್ಧನೆಗೊಳಿಸಬೇಕು. ಅದರ ಜೊತೆಗೆ ವಿಶ್ವವಿದ್ಯಾನಿಲಯಗಳಿಗೆ ಅನುದಾನವನ್ನು ನೀಡಬೇಕು ಎಂದರು.

ವಿಶ್ವದಲ್ಲಿ ಪ್ರಸ್ತುತವಾಗಿ ಅನೇಕ ಅವಕಾಶಗಳ ಸಾಧ್ಯತೆಗಳನ್ನು ತೆರೆಯಲು ಸಿದ್ಧವಾಗಿದೆ. ಅದಕ್ಕೆ ತಕ್ಕಂತೆ ಪದವೀಧರರು ಸಜ್ಜಾಗಬೇಕು. ಪದವೀಧರರಲ್ಲಿ ಈಗ ಹಿಂದಿಗಿಂತಲೂ ಜ್ಞಾನ ಮತ್ತು ಕೌಶಲ್ಯಕ್ಕೆ ಅಧಿಕ ಗೌರವ ಲಭ್ಯವಾಗುತ್ತಿದೆ. ಜೊತೆಗೆ ಕೌಶಲ ಹೊಂದಿರುವವರಿಗೆ ಪುರಸ್ಕಾರ ದೊರೆಯುತ್ತಿದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ, ಬಸ್‌, ಎಂಜಿನ್‌ ಕೆಟ್ಟು ಹೋಗಿದೆ: ಆರ್.ಅಶೋಕ್‌ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ ಅಷ್ಟೇ. ಬಸ್‌, ಎಂಜಿನ್‌ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ…

8 hours ago

ಮಡಿಕೇರಿ| ಹುಲಿ ದಾಳಿಗೆ ಜಾನುವಾರು ಬಲಿ

ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…

9 hours ago

ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ: ಶಾಸಕ ಹರೀಶ್‌ ಗೌಡ

ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ. ಈ…

9 hours ago

ಕಾಂಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಜೂ.6ಕ್ಕೆ ಭಾರತಕ್ಕೆ ವಾಪಸ್‌

ನವದೆಹಲಿ: ಕಾಂಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಜೂನ್.‌6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…

9 hours ago

3000 ರೂಗೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಈಗ ಸಚಿವೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…

9 hours ago

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಯು.ಟಿ.ಖಾದರ್‌

ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…

10 hours ago