photography contest
ಎಚ್.ಡಿ.ಕೋಟೆ : ತಾಲೂಕಿನ ವೃತ್ತಿಪರ ಛಾಯಾಗ್ರಾಹಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ 186ನೇ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ನಡೆದ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರತಿನಿಧಿ ಪತ್ರಿಕೆ ವರದಿಗಾರ ಮುರಳೀಧರ ಜಕ್ಕಹಳ್ಳಿ ಅವರು ತೆಗೆದ ಛಾಯಾಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ. ʻಮದುವೆಯ ಮಧುರ ಕ್ಷಣಗಳುʼ ಎಂಬ ಶೀರ್ಷಿಕೆಯಡಿ ಆಯೋಜಿಸಲಾಗಿದ್ದ ಈ ಸ್ಪರ್ಧೆಯಲ್ಲಿ ಮುರಳೀಧರ ಅವರಿಗೆ ಪ್ರಥಮ ಬಹುಮಾನ ಲಭಿಸಿದ್ದು, 3,000 ನಗದು ಮತ್ತು ಟ್ರೋಫಿ ನೀಡಲಾಗಿದೆ.
ಉಳಿದಂತೆ ಗುರುಸ್ವಾಮಿ ದ್ವಿತೀಯ ಬಹುಮಾನ, ಪರಮೇಶ್ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ. ವಿಜೇತರಿಗೆ ಶಾಸಕ ಅನಿಲ್ ಚಿಕ್ಕಮಾದು ಬಹುಮಾನವನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ವನ್ಯಜೀವಿ ಛಾಯಾಗ್ರಾಹಕ ಜಿ.ಎಸ್.ರವಿಶಂಕರ್, ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರವಿ ಕುಮಾರ್, ತಾಲೂಕು ಅಧ್ಯಕ್ಷ ರವಿ ಆರಾಧ್ಯ, ತಜಸೀಲ್ದಾರ್ ಶ್ರೀನಿವಾಸ್, ಛಾಯಾ ಚಿತ್ರದ ತೀರ್ಪುಗಾರ ಮಹೇಶ್ ಬರಣಿ, ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಶಿವರಾಜು ಹೈರಿಗೆ, ತಾಲೂಕು ಛಾಯಾಗ್ರಾಹಕರ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರು ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.
ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ಪ್ರತಿಯೊಂದು ಮಗುವಿಗೂ ಎಲ್ಲಾ ರೀತಿಯ ಅನುಭವ ಬೇಕು. ಆದರೆ ಎಲ್ಲ ಮಕ್ಕಳಿಗೂ ಅಂತಹ ಅವಕಾಶ ಒದಗಿ…
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…