photography contest
ಎಚ್.ಡಿ.ಕೋಟೆ : ತಾಲೂಕಿನ ವೃತ್ತಿಪರ ಛಾಯಾಗ್ರಾಹಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ 186ನೇ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ನಡೆದ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರತಿನಿಧಿ ಪತ್ರಿಕೆ ವರದಿಗಾರ ಮುರಳೀಧರ ಜಕ್ಕಹಳ್ಳಿ ಅವರು ತೆಗೆದ ಛಾಯಾಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ. ʻಮದುವೆಯ ಮಧುರ ಕ್ಷಣಗಳುʼ ಎಂಬ ಶೀರ್ಷಿಕೆಯಡಿ ಆಯೋಜಿಸಲಾಗಿದ್ದ ಈ ಸ್ಪರ್ಧೆಯಲ್ಲಿ ಮುರಳೀಧರ ಅವರಿಗೆ ಪ್ರಥಮ ಬಹುಮಾನ ಲಭಿಸಿದ್ದು, 3,000 ನಗದು ಮತ್ತು ಟ್ರೋಫಿ ನೀಡಲಾಗಿದೆ.
ಉಳಿದಂತೆ ಗುರುಸ್ವಾಮಿ ದ್ವಿತೀಯ ಬಹುಮಾನ, ಪರಮೇಶ್ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ. ವಿಜೇತರಿಗೆ ಶಾಸಕ ಅನಿಲ್ ಚಿಕ್ಕಮಾದು ಬಹುಮಾನವನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ವನ್ಯಜೀವಿ ಛಾಯಾಗ್ರಾಹಕ ಜಿ.ಎಸ್.ರವಿಶಂಕರ್, ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರವಿ ಕುಮಾರ್, ತಾಲೂಕು ಅಧ್ಯಕ್ಷ ರವಿ ಆರಾಧ್ಯ, ತಜಸೀಲ್ದಾರ್ ಶ್ರೀನಿವಾಸ್, ಛಾಯಾ ಚಿತ್ರದ ತೀರ್ಪುಗಾರ ಮಹೇಶ್ ಬರಣಿ, ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಶಿವರಾಜು ಹೈರಿಗೆ, ತಾಲೂಕು ಛಾಯಾಗ್ರಾಹಕರ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರು ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…