ಮೈಸೂರು ನಗರ

ವೃತ್ತಿಪರ ಛಾಯಾಚಿತ್ರ ಸ್ಪರ್ಧೆ : ಮುರಳೀಧರಗೆ ಪ್ರಥಮ ಸ್ಥಾನ

ಎಚ್.ಡಿ.ಕೋಟೆ : ತಾಲೂಕಿನ ವೃತ್ತಿಪರ ಛಾಯಾಗ್ರಾಹಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ 186ನೇ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ನಡೆದ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರತಿನಿಧಿ ಪತ್ರಿಕೆ ವರದಿಗಾರ ಮುರಳೀಧರ ಜಕ್ಕಹಳ್ಳಿ ಅವರು ತೆಗೆದ ಛಾಯಾಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ. ʻಮದುವೆಯ ಮಧುರ ಕ್ಷಣಗಳುʼ ಎಂಬ ಶೀರ್ಷಿಕೆಯಡಿ ಆಯೋಜಿಸಲಾಗಿದ್ದ ಈ ಸ್ಪರ್ಧೆಯಲ್ಲಿ ಮುರಳೀಧರ ಅವರಿಗೆ ಪ್ರಥಮ ಬಹುಮಾನ ಲಭಿಸಿದ್ದು, 3,000 ನಗದು ಮತ್ತು ಟ್ರೋಫಿ ನೀಡಲಾಗಿದೆ.

ಉಳಿದಂತೆ ಗುರುಸ್ವಾಮಿ ದ್ವಿತೀಯ ಬಹುಮಾನ, ಪರಮೇಶ್ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ. ವಿಜೇತರಿಗೆ ಶಾಸಕ ಅನಿಲ್‌ ಚಿಕ್ಕಮಾದು ಬಹುಮಾನವನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ವನ್ಯಜೀವಿ ಛಾಯಾಗ್ರಾಹಕ ಜಿ.ಎಸ್.ರವಿಶಂಕರ್, ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರವಿ ಕುಮಾರ್, ತಾಲೂಕು ಅಧ್ಯಕ್ಷ ರವಿ ಆರಾಧ್ಯ, ತಜಸೀಲ್ದಾರ್ ಶ್ರೀನಿವಾಸ್, ಛಾಯಾ ಚಿತ್ರದ ತೀರ್ಪುಗಾರ ಮಹೇಶ್ ಬರಣಿ, ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಶಿವರಾಜು ಹೈರಿಗೆ, ತಾಲೂಕು ಛಾಯಾಗ್ರಾಹಕರ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರು ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

4 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

5 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

10 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

10 hours ago