ಮೈಸೂರು: ನಗರದಲ್ಲಿ ಆನೆಗಳ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳು ಮತ್ತು ಸೌರ ಬೇಲಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿ ವರದಿ ನೀಡಬೇಕೆಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಅರಣ್ಯ ಭವನದಲ್ಲಿಂದು ಮಾತನಾಡಿದ ಅವರು, ಮಾನವ-ವನ್ಯಜೀವಿಗಳ ಸಂಘರ್ಷ ತಡೆಗಟ್ಟಲು ಪ್ರಾಣಿಗಳಿಗೆ ಅವಶ್ಯವಿರುವ ಸಸ್ಯಗಳನ್ನು ಕಾಡಿನಲ್ಲಿ ಬೆಳೆಸುವುದು. ಕುಡಿಯಲು ನೀರು ಗುಂಡಿಗಳು ಬತ್ತದಂತೆ ಸೌರ್ ಪಂಪ್ಸೆಟ್ ಮೂಲಕ ಕೊಳವೆ ಬಾವಿಗಳಿಂದ ನೀರು ಹರಿಸುವುದು ಸೇರಿದಂತೆ ಪ್ರಾಣಿಗಳು ನಾಡಿಗೆ ಬರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಬೇಸಿಗೆಯಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಅರಣ್ಯ ನಾಶವಾಗುತ್ತದೆ. ಇದಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ವೇಳೆ ಕಾಡ್ಗಿಚ್ಚು ಕಾಣಿಸಿಕೊಂಡರೆ ಕೂಡಲೇ ನಂದಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹಾಗೆಯೇ ಅಗ್ನಿಶಾಮಕ ಸಿಬ್ಬಂದಿ ಸನ್ನದ್ದವಾಗಿರುವಂತೆ ನಿರ್ದೇಶಿಸಲು ಸೂಚಿಸಿದರು.
ಮೈಸೂರು ನಗರವನ್ನು ಏಕ ಪ್ಲಾಸ್ಟಿಕ್ ಮುಕ್ತ ನಗರವೆಂದು ಘೋಷಿಸಿದ್ದು, ನಗರದಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಲೋಟ, ಬಾಟಲಿ ಸೇರಿದಂತೆ ಒಂದು ಬಾರಿ ಬಳಸಿ ಬೀಸಾಡುವ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಬೇಕು. ತಪಾಸಣೆ ನಡೆಸಿ ಈ ರೀತಿಯ ಪ್ಲಾಸ್ಟಿಕ್ ಬಳಸುವ ಅಂಗಡಿಗಳಿಗೆ ದಂಡ ವಿಧಿಸಲು ಸೂಚನೆ ನೀಡಿದರು.
ರಾಜ್ಯದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ತರಾಗುತ್ತಿರುವ ಘಟನೆಗಳು ಇತ್ತೀಚಿಗೆ ವರದಿಯಾದ ಹಿನ್ನಲೆಯಲ್ಲಿ, ಕುಡಿಯುವ ನೀರು ಪೂರೈಕೆ ಮಾಡುವ ಟ್ಯಾಂಕ್ಗಳ ನೀರಿನ ಗುಣಮಟ್ಟ ಪರೀಕ್ಷಿಸುವಂತೆ ಪರಿಸರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮೈಸೂರು ವೃತ್ತದ ಸಿಸಿಎಫ್ ಮಾಲತಿ ಪ್ರಿಯಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಎನ್. ಬಸವರಾಜು ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…