ಮೈಸೂರು ನಗರ

ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ ಕೇಸ್‌ : ವಹಿವಾಟಿಗೆ ತಡೆ

ಮೈಸೂರು : ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಹಿವಾಟು ನಡೆಸದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ವಲಯ ಕಚೇರಿ ೪ರ ಆಯುಕ್ತರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಅಧಿಕಾರಿ ಹಾಗೂ ಓರ್ವ ನೌಕರ ಅಮಾನತ್ತಾಗಿದ್ದಾರೆ. ಸಸ್ಪೆಂಡ್ ಆಗಿರುವ ಸಿಬ್ಬಂದಿ ತಡೆಯಾಜ್ಞೆ ತಂದಿದ್ದಾರೆ. ಆದರೆ, ಪ್ರಕರಣ ಸಂಬಂಧ ಇಲಾಖೆ ತನಿಖೆ ನಡೆಯುತ್ತಿರುವ ಕಾರಣ ತನಿಖೆ ಮುಕ್ತಾಯವಾಗುವವರೆಗೆ ಆಸ್ತಿಗೆ ಸಂಬಂಧಪಟ್ಟಂತೆ ಯಾವುದೇ ವಹಿವಾಟು ನಡೆಸದಂತೆ ಆಯುಕ್ತ ಕೆ.ಆರ್.ರಕ್ಷಿತ್ ಸೂಚಿಸಿದ್ದಾರೆ.

ಗೋಕುಲಂ ೩ನೇ ಹಂತ ನಿವೇಶನ ಸಂಖ್ಯೆ ೮೬೭ ಲಿಲಿಯನ್ ಶಾರದಾ ಜೋಸೆಫ್ ಎಂಬವರಿಗೆ ಮುಡಾದಿಂದ ೧೯೮೨ರ ಜ.೨ ರಲ್ಲಿ ಮಂಜೂರಾಗಿದೆ. ೧೯೮೨ ಡಿಸೆಂಬರ್ ೩ರಲ್ಲಿ ಸ್ವಾಽನ ಪತ್ರ ನೀಡಲಾಗಿದೆ. ೧೯೮೩ರ ಸೆಪ್ಟೆಂಬರ್ ೩ರಲ್ಲಿ ಲಿಲಿಯನ್ ಶಾರದಾ ಜೋಸೆಫ್ ಮೃತಪಟ್ಟಿದ್ದಾರೆ. ೨೦೦೮ರ ಮೇ ೨೨ರಲ್ಲಿ ಪೌತಿದಾರರ ಕುಟುಂಬ ಜೀವಿತ ಪತ್ರದಂತೆ ಹಾಗೂ ನೋಂದಾಯಿತ ವಿಭಾಗ ಪತ್ರದಂತೆ ನವಿಲ್ ಮಾರ್ಕಸ್ ಜೋಸೆಫ್ ಎಂಬವರಿಗೆ ಸೇರಿದೆ ಎಂದು ದಾಖಲೆಗಳನ್ನ ಸೃಷ್ಟಿಸಿ ೨೦೨೪ರ ಏಪ್ರಿಲ್ ೬ರಂದು ವರ್ಗಾವಣೆ ಮಾಡಿ ಇದಕ್ಕೆ ಹೊಂದಿಕೊಂಡಂತಿರುವ ತುಂಡು ಜಾಗವನ್ನೂ ಸೇರಿ ಕ್ರಯಪತ್ರ ಮಾಡಿಕೊಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತಹಸಿಲ್ದಾರ್ ರಾಜಶೇಖರ್ ಹಾಗೂ ವ್ಯವಸ್ಥಾಪಕ ಸೋಮುಸುಂದ್ರ ಇಬ್ಬರನ್ನು ಸಸ್ಪೆಂಡ್ ಮಾಡಿತ್ತು. ಅಮಾನತ್ತನ್ನ ಪ್ರಶ್ನಿಸಿ ಇವರಿಬ್ಬರೂ ತಡೆಯಾಜ್ಞೆ ತಂದಿದ್ದಾರೆ. ಆದರೆ, ಇನ್ನೂ ಇಲಾಖಾ ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣವಾಗುವವರೆಗೆ ಈ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ ವಹಿವಾಟು ನಡೆಸಬಾರದು ಎಂದು ಮಹಾನಗರ ಪಾಲಿಕೆ ವಲಯ ಕಚೇರಿ ೪ರ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

3 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

3 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

3 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

3 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

3 hours ago