ಮೈಸೂರು : ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಹಿವಾಟು ನಡೆಸದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ವಲಯ ಕಚೇರಿ ೪ರ ಆಯುಕ್ತರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಅಧಿಕಾರಿ ಹಾಗೂ ಓರ್ವ ನೌಕರ ಅಮಾನತ್ತಾಗಿದ್ದಾರೆ. ಸಸ್ಪೆಂಡ್ ಆಗಿರುವ ಸಿಬ್ಬಂದಿ ತಡೆಯಾಜ್ಞೆ ತಂದಿದ್ದಾರೆ. ಆದರೆ, ಪ್ರಕರಣ ಸಂಬಂಧ ಇಲಾಖೆ ತನಿಖೆ ನಡೆಯುತ್ತಿರುವ ಕಾರಣ ತನಿಖೆ ಮುಕ್ತಾಯವಾಗುವವರೆಗೆ ಆಸ್ತಿಗೆ ಸಂಬಂಧಪಟ್ಟಂತೆ ಯಾವುದೇ ವಹಿವಾಟು ನಡೆಸದಂತೆ ಆಯುಕ್ತ ಕೆ.ಆರ್.ರಕ್ಷಿತ್ ಸೂಚಿಸಿದ್ದಾರೆ.
ಗೋಕುಲಂ ೩ನೇ ಹಂತ ನಿವೇಶನ ಸಂಖ್ಯೆ ೮೬೭ ಲಿಲಿಯನ್ ಶಾರದಾ ಜೋಸೆಫ್ ಎಂಬವರಿಗೆ ಮುಡಾದಿಂದ ೧೯೮೨ರ ಜ.೨ ರಲ್ಲಿ ಮಂಜೂರಾಗಿದೆ. ೧೯೮೨ ಡಿಸೆಂಬರ್ ೩ರಲ್ಲಿ ಸ್ವಾಽನ ಪತ್ರ ನೀಡಲಾಗಿದೆ. ೧೯೮೩ರ ಸೆಪ್ಟೆಂಬರ್ ೩ರಲ್ಲಿ ಲಿಲಿಯನ್ ಶಾರದಾ ಜೋಸೆಫ್ ಮೃತಪಟ್ಟಿದ್ದಾರೆ. ೨೦೦೮ರ ಮೇ ೨೨ರಲ್ಲಿ ಪೌತಿದಾರರ ಕುಟುಂಬ ಜೀವಿತ ಪತ್ರದಂತೆ ಹಾಗೂ ನೋಂದಾಯಿತ ವಿಭಾಗ ಪತ್ರದಂತೆ ನವಿಲ್ ಮಾರ್ಕಸ್ ಜೋಸೆಫ್ ಎಂಬವರಿಗೆ ಸೇರಿದೆ ಎಂದು ದಾಖಲೆಗಳನ್ನ ಸೃಷ್ಟಿಸಿ ೨೦೨೪ರ ಏಪ್ರಿಲ್ ೬ರಂದು ವರ್ಗಾವಣೆ ಮಾಡಿ ಇದಕ್ಕೆ ಹೊಂದಿಕೊಂಡಂತಿರುವ ತುಂಡು ಜಾಗವನ್ನೂ ಸೇರಿ ಕ್ರಯಪತ್ರ ಮಾಡಿಕೊಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತಹಸಿಲ್ದಾರ್ ರಾಜಶೇಖರ್ ಹಾಗೂ ವ್ಯವಸ್ಥಾಪಕ ಸೋಮುಸುಂದ್ರ ಇಬ್ಬರನ್ನು ಸಸ್ಪೆಂಡ್ ಮಾಡಿತ್ತು. ಅಮಾನತ್ತನ್ನ ಪ್ರಶ್ನಿಸಿ ಇವರಿಬ್ಬರೂ ತಡೆಯಾಜ್ಞೆ ತಂದಿದ್ದಾರೆ. ಆದರೆ, ಇನ್ನೂ ಇಲಾಖಾ ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣವಾಗುವವರೆಗೆ ಈ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ ವಹಿವಾಟು ನಡೆಸಬಾರದು ಎಂದು ಮಹಾನಗರ ಪಾಲಿಕೆ ವಲಯ ಕಚೇರಿ ೪ರ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…