ಮೈಸೂರು : ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಹಿವಾಟು ನಡೆಸದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ವಲಯ ಕಚೇರಿ ೪ರ ಆಯುಕ್ತರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಅಧಿಕಾರಿ ಹಾಗೂ ಓರ್ವ ನೌಕರ ಅಮಾನತ್ತಾಗಿದ್ದಾರೆ. ಸಸ್ಪೆಂಡ್ ಆಗಿರುವ ಸಿಬ್ಬಂದಿ ತಡೆಯಾಜ್ಞೆ ತಂದಿದ್ದಾರೆ. ಆದರೆ, ಪ್ರಕರಣ ಸಂಬಂಧ ಇಲಾಖೆ ತನಿಖೆ ನಡೆಯುತ್ತಿರುವ ಕಾರಣ ತನಿಖೆ ಮುಕ್ತಾಯವಾಗುವವರೆಗೆ ಆಸ್ತಿಗೆ ಸಂಬಂಧಪಟ್ಟಂತೆ ಯಾವುದೇ ವಹಿವಾಟು ನಡೆಸದಂತೆ ಆಯುಕ್ತ ಕೆ.ಆರ್.ರಕ್ಷಿತ್ ಸೂಚಿಸಿದ್ದಾರೆ.
ಗೋಕುಲಂ ೩ನೇ ಹಂತ ನಿವೇಶನ ಸಂಖ್ಯೆ ೮೬೭ ಲಿಲಿಯನ್ ಶಾರದಾ ಜೋಸೆಫ್ ಎಂಬವರಿಗೆ ಮುಡಾದಿಂದ ೧೯೮೨ರ ಜ.೨ ರಲ್ಲಿ ಮಂಜೂರಾಗಿದೆ. ೧೯೮೨ ಡಿಸೆಂಬರ್ ೩ರಲ್ಲಿ ಸ್ವಾಽನ ಪತ್ರ ನೀಡಲಾಗಿದೆ. ೧೯೮೩ರ ಸೆಪ್ಟೆಂಬರ್ ೩ರಲ್ಲಿ ಲಿಲಿಯನ್ ಶಾರದಾ ಜೋಸೆಫ್ ಮೃತಪಟ್ಟಿದ್ದಾರೆ. ೨೦೦೮ರ ಮೇ ೨೨ರಲ್ಲಿ ಪೌತಿದಾರರ ಕುಟುಂಬ ಜೀವಿತ ಪತ್ರದಂತೆ ಹಾಗೂ ನೋಂದಾಯಿತ ವಿಭಾಗ ಪತ್ರದಂತೆ ನವಿಲ್ ಮಾರ್ಕಸ್ ಜೋಸೆಫ್ ಎಂಬವರಿಗೆ ಸೇರಿದೆ ಎಂದು ದಾಖಲೆಗಳನ್ನ ಸೃಷ್ಟಿಸಿ ೨೦೨೪ರ ಏಪ್ರಿಲ್ ೬ರಂದು ವರ್ಗಾವಣೆ ಮಾಡಿ ಇದಕ್ಕೆ ಹೊಂದಿಕೊಂಡಂತಿರುವ ತುಂಡು ಜಾಗವನ್ನೂ ಸೇರಿ ಕ್ರಯಪತ್ರ ಮಾಡಿಕೊಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತಹಸಿಲ್ದಾರ್ ರಾಜಶೇಖರ್ ಹಾಗೂ ವ್ಯವಸ್ಥಾಪಕ ಸೋಮುಸುಂದ್ರ ಇಬ್ಬರನ್ನು ಸಸ್ಪೆಂಡ್ ಮಾಡಿತ್ತು. ಅಮಾನತ್ತನ್ನ ಪ್ರಶ್ನಿಸಿ ಇವರಿಬ್ಬರೂ ತಡೆಯಾಜ್ಞೆ ತಂದಿದ್ದಾರೆ. ಆದರೆ, ಇನ್ನೂ ಇಲಾಖಾ ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣವಾಗುವವರೆಗೆ ಈ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ ವಹಿವಾಟು ನಡೆಸಬಾರದು ಎಂದು ಮಹಾನಗರ ಪಾಲಿಕೆ ವಲಯ ಕಚೇರಿ ೪ರ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…