ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡುವ ಮುನ್ನವೇ ತಮ್ಮ ತಂದೆಯವರಾದ ಸಿದ್ದರಾಮಯ್ಯ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪ ಮಾಡುವುದು ಕಾನೂನು ಬಾಹಿರ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ದೂರಿದ್ದಾರೆ.
ನಗರದಲ್ಲಿ ಇಂದು (ಜ.19) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದ ತನಿಖೆ ಕುರಿತು ಸಿಬಿಐಗೆ ವಹಿಸಬೇಕೆ ಬೇಡವೇ ಎಂಬ ವಿಚಾರ ಜ.26 ರಂದು ನ್ಯಾಯಾಲಯದ ಮುಂದೆ ಬರುತ್ತಿದೆ. ಇಂತಹ ಸಮಯದಲ್ಲಿ ಇಡಿ ಅಧಿಕಾರಿಗಳು ನ್ಯಾಯಾಲಯವನ್ನು ತಪ್ಪು ದಾರಿಗೆಳೆಯಲು ಉದ್ದೇಶಪೂರ್ವಕವಾಗಿ ಟ್ವೀಟ್ ಮಾಡಿ ಹಂಚಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ಕಾನೂನು ಪ್ರಕಾರ ಹೋರಾಟ ಮಾಡುತ್ತೇವೆ ಎಂದಿದ್ದಾರೆ ಎಂದು ಅಪ್ಪನ ಪರ ಬ್ಯಾಟ್ ಬೀಸಿದರು.
ಇಡಿ ಮುಟ್ಟುಗೋಲು ಹಾಕಿಕೊಂಡಿರುವ ನಿವೇಶನಗಳಲ್ಲಿ ತಾಯಿ ಪಾರ್ವತಿ ಅವರಿಗೆ ಹಂಚಿಕೆಯಾಗಿದ್ದ 14 ನಿವೇಶನಗಳು ಸೇರಿಲ್ಲ. ಆದರೂ ಬಿಜೆಪಿ ಸಿದ್ದರಾಮಯ್ಯ ಅವರ ಹೆಸರನ್ನು ಹಾಳುಮಾಡಲು ಈ ರೀತಿಯ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದರು.
50:50 ಅನುಪಾತದಡಿ ನಿವೇಶನಗಳು ಹಂಚಿಕೆಯಾಗಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಅಂದಿನ ಸರ್ಕಾರದಲ್ಲಿ ಇದ್ದ ಸಚಿವರು ಹಾಗೂ ಆಗಿನ ಅಧಿಕಾರಿಗಳನ್ನು ಬೇಕಾದರೆ ತನಿಖೆಗೆ ಒಳಪಡಿಸಲಿ ಎಂದು ಆಗ್ರಹಿಸಿದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…