ಮೈಸೂರು ನಗರ

ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ: ಮೈಸೂರು ಪಾಲಿಕೆ ಆರೋಗ್ಯಾಧಿಕಾರಿ ವೆಂಕಟೇಶ್‌

ಮೈಸೂರು: ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ ಎಂದು ಮೈಸೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಈ ಬಾರಿ ಮೈಸೂರಿಗೆ ಉತ್ತಮ ಮಳೆಯಾಗಿದ್ದು, ಮಳೆಯ ನೀರಿನಿಂದ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಜೂನ್ ತಿಂಗಳಲ್ಲಿ ಮಾರಣಾಂತಿಕ ಕಾಯಿಲೆ ಬರುವ ಸಾಧ್ಯತೆಗಳು ಹೆಚ್ಚಾಗಿದೆ. ನಿಂತ ನೀರಿನಿಂದ ಸೊಳ್ಳೆಗಳ ಸಂತಾನ ಹೆಚ್ಚಾಗಲಿದ್ದು, ನಾಗರೀಕರು ಸೊಳ್ಳೆ ಬಾರದ ಹಾಗೆ ಎಚ್ಚರವಹಿಸಿ, ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇನ್ನು ಜನತೆ ಕೋವಿಡ್ ಬಗ್ಗೆ ಭಯ ಪಡುವುದು ಬೇಡ. ನಾಗರೀಕರು ಎಲ್ಲೆಂದರಲ್ಲಿ ಕಸವನ್ನು ಬೀದಿಗೆ ಹಾಕಬಾರದು. ರಾತ್ರಿ ವೇಳೆ ಬೀದಿಬದಿ ವ್ಯಾಪಾರಸ್ಥರು ಹೆಚ್ಚಾಗಿ ಕಸ ಹಾಕುತ್ತಿದ್ದಾರೆ. ಬಿಸಾಕಿದ ಕಸವು ಮಳೆ ನೀರಿಗೆ ಸಿಲುಕಿ ಚರಂಡಿಗೆ ಸೇರಿಕೊಳ್ಳುತ್ತದೆ. ಇದರಿಂದ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಮ್ಮೊಂದಿಗೆ ನಗರದ ಜನರು ಸಹಕರಿಸಬೇಕು. ಆರೋಗ್ಯದ ದೃಷ್ಟಿಯಿಂದ ಬೀದಿಬದಿ ಆಹಾರಗಳನ್ನು ಸೇವಿಸಬೇಡಿ ಎಂದು ಮನವಿ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಸದ ಸಮಸ್ಯೆ ಇದ್ದರೆ ಪಾಲಿಕೆಗೆ ಒಂದೇ ಒಂದು ಕರೆ ಮಾಡಿ. ಕಸದ ಸಮಸ್ಯೆ ಎದುರಿಸಲು ನಮ್ಮ ತಂಡ ಸಜ್ಜಾಗಿದೆ. ಕಸ ಕಂಡಲ್ಲಿ ಒಂದೇ ಒಂದು ಫೋಟೋ ಅಥವಾ ಕರೆ ಮಾಡಿ ಮಾಹಿತಿ ನೀಡಿ. ಕೇವಲ ಒಂದೇ ಗಂಟೆಯಲ್ಲೇ ಸಮಸ್ಯೆ ಸರಿಪಡಿಸುತ್ತೇವೆ. ಎಲ್ಲೆಂದರಲ್ಲಿ ಕಸ ಬಿಸಾಕುವವರಿಗೆ ದಂಡ ಹಾಕುತ್ತಿದ್ದೇವೆ. ಕೆಲವು ಗಂಭೀರ ಪ್ರಕರಣವಿದ್ದರೆ ಎಫ್‌ಐಆರ್ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

15 mins ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

28 mins ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

41 mins ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

55 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

1 hour ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago