ಮೈಸೂರು ನಗರ

ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ: ಮೈಸೂರು ಪಾಲಿಕೆ ಆರೋಗ್ಯಾಧಿಕಾರಿ ವೆಂಕಟೇಶ್‌

ಮೈಸೂರು: ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ ಎಂದು ಮೈಸೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಈ ಬಾರಿ ಮೈಸೂರಿಗೆ ಉತ್ತಮ ಮಳೆಯಾಗಿದ್ದು, ಮಳೆಯ ನೀರಿನಿಂದ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಜೂನ್ ತಿಂಗಳಲ್ಲಿ ಮಾರಣಾಂತಿಕ ಕಾಯಿಲೆ ಬರುವ ಸಾಧ್ಯತೆಗಳು ಹೆಚ್ಚಾಗಿದೆ. ನಿಂತ ನೀರಿನಿಂದ ಸೊಳ್ಳೆಗಳ ಸಂತಾನ ಹೆಚ್ಚಾಗಲಿದ್ದು, ನಾಗರೀಕರು ಸೊಳ್ಳೆ ಬಾರದ ಹಾಗೆ ಎಚ್ಚರವಹಿಸಿ, ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇನ್ನು ಜನತೆ ಕೋವಿಡ್ ಬಗ್ಗೆ ಭಯ ಪಡುವುದು ಬೇಡ. ನಾಗರೀಕರು ಎಲ್ಲೆಂದರಲ್ಲಿ ಕಸವನ್ನು ಬೀದಿಗೆ ಹಾಕಬಾರದು. ರಾತ್ರಿ ವೇಳೆ ಬೀದಿಬದಿ ವ್ಯಾಪಾರಸ್ಥರು ಹೆಚ್ಚಾಗಿ ಕಸ ಹಾಕುತ್ತಿದ್ದಾರೆ. ಬಿಸಾಕಿದ ಕಸವು ಮಳೆ ನೀರಿಗೆ ಸಿಲುಕಿ ಚರಂಡಿಗೆ ಸೇರಿಕೊಳ್ಳುತ್ತದೆ. ಇದರಿಂದ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಮ್ಮೊಂದಿಗೆ ನಗರದ ಜನರು ಸಹಕರಿಸಬೇಕು. ಆರೋಗ್ಯದ ದೃಷ್ಟಿಯಿಂದ ಬೀದಿಬದಿ ಆಹಾರಗಳನ್ನು ಸೇವಿಸಬೇಡಿ ಎಂದು ಮನವಿ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಸದ ಸಮಸ್ಯೆ ಇದ್ದರೆ ಪಾಲಿಕೆಗೆ ಒಂದೇ ಒಂದು ಕರೆ ಮಾಡಿ. ಕಸದ ಸಮಸ್ಯೆ ಎದುರಿಸಲು ನಮ್ಮ ತಂಡ ಸಜ್ಜಾಗಿದೆ. ಕಸ ಕಂಡಲ್ಲಿ ಒಂದೇ ಒಂದು ಫೋಟೋ ಅಥವಾ ಕರೆ ಮಾಡಿ ಮಾಹಿತಿ ನೀಡಿ. ಕೇವಲ ಒಂದೇ ಗಂಟೆಯಲ್ಲೇ ಸಮಸ್ಯೆ ಸರಿಪಡಿಸುತ್ತೇವೆ. ಎಲ್ಲೆಂದರಲ್ಲಿ ಕಸ ಬಿಸಾಕುವವರಿಗೆ ದಂಡ ಹಾಕುತ್ತಿದ್ದೇವೆ. ಕೆಲವು ಗಂಭೀರ ಪ್ರಕರಣವಿದ್ದರೆ ಎಫ್‌ಐಆರ್ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

2 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

3 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

3 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

3 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

3 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

4 hours ago