ಮೈಸೂರು ನಗರ

ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ: ಮೈಸೂರು ಪಾಲಿಕೆ ಆರೋಗ್ಯಾಧಿಕಾರಿ ವೆಂಕಟೇಶ್‌

ಮೈಸೂರು: ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ ಎಂದು ಮೈಸೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಈ ಬಾರಿ ಮೈಸೂರಿಗೆ ಉತ್ತಮ ಮಳೆಯಾಗಿದ್ದು, ಮಳೆಯ ನೀರಿನಿಂದ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಜೂನ್ ತಿಂಗಳಲ್ಲಿ ಮಾರಣಾಂತಿಕ ಕಾಯಿಲೆ ಬರುವ ಸಾಧ್ಯತೆಗಳು ಹೆಚ್ಚಾಗಿದೆ. ನಿಂತ ನೀರಿನಿಂದ ಸೊಳ್ಳೆಗಳ ಸಂತಾನ ಹೆಚ್ಚಾಗಲಿದ್ದು, ನಾಗರೀಕರು ಸೊಳ್ಳೆ ಬಾರದ ಹಾಗೆ ಎಚ್ಚರವಹಿಸಿ, ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇನ್ನು ಜನತೆ ಕೋವಿಡ್ ಬಗ್ಗೆ ಭಯ ಪಡುವುದು ಬೇಡ. ನಾಗರೀಕರು ಎಲ್ಲೆಂದರಲ್ಲಿ ಕಸವನ್ನು ಬೀದಿಗೆ ಹಾಕಬಾರದು. ರಾತ್ರಿ ವೇಳೆ ಬೀದಿಬದಿ ವ್ಯಾಪಾರಸ್ಥರು ಹೆಚ್ಚಾಗಿ ಕಸ ಹಾಕುತ್ತಿದ್ದಾರೆ. ಬಿಸಾಕಿದ ಕಸವು ಮಳೆ ನೀರಿಗೆ ಸಿಲುಕಿ ಚರಂಡಿಗೆ ಸೇರಿಕೊಳ್ಳುತ್ತದೆ. ಇದರಿಂದ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಮ್ಮೊಂದಿಗೆ ನಗರದ ಜನರು ಸಹಕರಿಸಬೇಕು. ಆರೋಗ್ಯದ ದೃಷ್ಟಿಯಿಂದ ಬೀದಿಬದಿ ಆಹಾರಗಳನ್ನು ಸೇವಿಸಬೇಡಿ ಎಂದು ಮನವಿ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಸದ ಸಮಸ್ಯೆ ಇದ್ದರೆ ಪಾಲಿಕೆಗೆ ಒಂದೇ ಒಂದು ಕರೆ ಮಾಡಿ. ಕಸದ ಸಮಸ್ಯೆ ಎದುರಿಸಲು ನಮ್ಮ ತಂಡ ಸಜ್ಜಾಗಿದೆ. ಕಸ ಕಂಡಲ್ಲಿ ಒಂದೇ ಒಂದು ಫೋಟೋ ಅಥವಾ ಕರೆ ಮಾಡಿ ಮಾಹಿತಿ ನೀಡಿ. ಕೇವಲ ಒಂದೇ ಗಂಟೆಯಲ್ಲೇ ಸಮಸ್ಯೆ ಸರಿಪಡಿಸುತ್ತೇವೆ. ಎಲ್ಲೆಂದರಲ್ಲಿ ಕಸ ಬಿಸಾಕುವವರಿಗೆ ದಂಡ ಹಾಕುತ್ತಿದ್ದೇವೆ. ಕೆಲವು ಗಂಭೀರ ಪ್ರಕರಣವಿದ್ದರೆ ಎಫ್‌ಐಆರ್ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago