ಬೆಂಗಳೂರು: ಸರ್ಕಾರದ ಹಣವನ್ನು ಬಳಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಪಕ್ಷದ ಸಮಾವೇಶವನ್ನು ಮಾಡುತ್ತಿರುವುದು ಖಂಡನೀಯ. ಇದರ ವಿರುದ್ಧ ವಿಧಾನಸೌಧ ಮುಂಭಾಗ ನಾಳೆ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ದೊರೆತ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಿ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ನಕಲಿ ಗಾಂಧಿಗಳು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿ ಈಗ ಬೆಳಗಾವಿಯಲ್ಲಿ ಸಮಾವೇಶ ಮಾಡುತ್ತಿದ್ದಾರೆ. ಗಾಂಧೀಜಿ ಬಹಳ ಸರಳವಾಗಿದ್ದರು. ಆದರೆ ಕಾಂಗ್ರೆಸ್ ನಾಯಕರು ಆಡಂಬರದ ಬದುಕು ನಡೆಸುತ್ತಿದ್ದಾರೆ. ಪ್ರಧಾನಿ, ಗೃಹ ಸಚಿವರು, ಎಚ್.ಡಿ.ಕುಮಾರಸ್ವಾಮಿ, ಸಂಸದರು, ಯಾರನ್ನೂ ಆಹ್ವಾನಿಸದೆ ಕಾಂಗ್ರೆಸ್ ಪಕ್ಷದ ನಾಯಕರನ್ನು ಮಾತ್ರ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಇದು ಸರ್ಕಾರಿ ಕಾರ್ಯಕ್ರಮವಲ್ಲ, ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಎಂದು ದೂರಿದರು.
ಇದು ಕಾಂಗ್ರೆಸ್ನ ಕಾರ್ಯಕ್ರಮವಾಗಿರುವುದರಿಂದ ನಾವ್ಯಾರೂ ಹೋಗುವುದಿಲ್ಲ. ವಿಧಾನಸೌಧ ಮುಂಭಾಗದ ಗಾಂಧಿ ಪ್ರತಿಮೆಗೆ ನಾವೆಲ್ಲರೂ ಪುಷ್ಪ ನಮನ ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.
ಕಾಂಗ್ರೆಸ್ನವರು ಅಖಂಡ ಭಾರತವನ್ನು ಒಡೆದು ಹಾಕಿದ್ದರು. ನಾವು ಅಖಂಡ ಭಾರತದ ಚಿತ್ರ ತೋರಿಸಿದರೆ, ಕಾಂಗ್ರೆಸ್ನವರು ಜಮ್ಮು-ಕಾಶ್ಮೀರ ಇಲ್ಲದ ಭಾರತದ ಚಿತ್ರ ತೋರಿಸುತ್ತಿದ್ದಾರೆ. ಭಾರತದ ಭೂಪಟವನ್ನೇ ಛಿದ್ರ ಮಾಡಿರುವುದು ಖಂಡನೀಯ. ಕಾಂಗ್ರೆಸ್ ಇಡೀ ದೇಶವನ್ನು ಒಡೆಯುವ ಮನಸ್ಥಿತಿ ಹೊಂದಿದೆ ಎಂದು ಕಿಡಿಕಾರಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಎಂದೂ ಕೂಡ ಕಾಂಗ್ರೆಸ್ನ ನಾಯಕರಾಗಿರಲಿಲ್ಲ. ಅವರು ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿ, ಸರ್ಕಾರದ ವಿರುದ್ಧ ನಿಂತಿದ್ದರು. ತಮ್ಮದೇ ಪಕ್ಷ ಆರಂಭಿಸಿ ಅಲ್ಲಿಂದಲೇ ಸ್ಪರ್ಧಿಸಿದ್ದರು. ಅವರು ಚುನಾವಣೆಗೆ ನಿಂತಾಗ ಜವಹರಲಾಲ್ ನೆಹರು ಅವರ ವಿರುದ್ಧ ಪ್ರಚಾರ ಮಾಡಿ, ಅಂಬೇಡ್ಕರ್ ಸೋಲಿಸಿ ಎಂಬ ಸಂದೇಶ ನೀಡಿದ್ದರು. ಈಗ ಕಾಂಗ್ರೆಸ್ ನಾಯಕರು ಯಾವ ಮುಖ ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…