ಮೈಸೂರು ನಗರ

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು.

ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮುಂದೆ ಜಮಾಯಿಸಿದ ರೈತರು ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಬ್ಬು ಬೆಳೆಗಾರರ ಸಂಘದ ರಾಜ್ಯ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರ ಎರಡು ಕೂಡ ರೈತರನ್ನು ಕೃಷಿಯಿಂದ ಒಕ್ಕಲು ಎಬ್ಬಿಸುವ ಕೆಲಸ ಮಾಡುತ್ತಿವೆ.

ರೈತರ ಕೃಷಿ ಆದಾಯವನ್ನು 2026ಕ್ಕೆ ದ್ವಿಗುಣ ಗೊಳಿಸುತ್ತೇವೆ ಎಂದು ನರೇಂದ್ರ ಮೋದಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಕೃಷಿ ಆದಾಯ ದ್ವಿಗುಣಗೊಳ್ಳದೆ ಕೃಷಿಗೆ ಬಳಸುವ ರಸಗೊಬ್ಬರದ ಬೆಲೆ ಏರಿಕೆಯಾಗಿದೆ.

ರಾಜ್ಯದಲ್ಲಿ ಎರಡು ಕೋಟಿ ಟನ್‌ನಷ್ಟು ಯೂರಿಯಾ ರೈತರಿಗೆ ಬೇಕಾಗಿದೆ. ಆದರೆ 50% ರಸಗೊಬ್ಬರ ಇದೆ. ರೈತರಿಗೆ 50% ರಸ ಗೊಬ್ಬರದ ಕೊರತೆ ಆಗುವ ಸಾಧ್ಯತೆ ಇದೆ. ಎಫ್ ಐ ಡಿ ಇಲ್ಲದೆ ಬಗರು ಹುಕುಂ, ಗುತ್ತಿಗೆ ಮಾಡುವ ರೈತರ ಜಮೀನು, 10-15% ಪೌತಿ ಖಾತೆ ಆಗಿರುವುದಿಲ್ಲ. ಇವರಿಗೆ ರಸಗೊಬ್ಬರ ಕೊಡುವವರು ಯಾರು?. ರಾಜ್ಯ ಸರ್ಕಾರ ಪರ್ಯಾಯ ಮಾರ್ಗವನ್ನು ಕಂಡುಹಿಡಿದು ರೈತರಿಗೆ ರಸ ಗೊಬ್ಬರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

 

 

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

2 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

3 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

3 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

3 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

4 hours ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

4 hours ago