ಮೈಸೂರು ನಗರ

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು.

ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮುಂದೆ ಜಮಾಯಿಸಿದ ರೈತರು ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಬ್ಬು ಬೆಳೆಗಾರರ ಸಂಘದ ರಾಜ್ಯ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರ ಎರಡು ಕೂಡ ರೈತರನ್ನು ಕೃಷಿಯಿಂದ ಒಕ್ಕಲು ಎಬ್ಬಿಸುವ ಕೆಲಸ ಮಾಡುತ್ತಿವೆ.

ರೈತರ ಕೃಷಿ ಆದಾಯವನ್ನು 2026ಕ್ಕೆ ದ್ವಿಗುಣ ಗೊಳಿಸುತ್ತೇವೆ ಎಂದು ನರೇಂದ್ರ ಮೋದಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಕೃಷಿ ಆದಾಯ ದ್ವಿಗುಣಗೊಳ್ಳದೆ ಕೃಷಿಗೆ ಬಳಸುವ ರಸಗೊಬ್ಬರದ ಬೆಲೆ ಏರಿಕೆಯಾಗಿದೆ.

ರಾಜ್ಯದಲ್ಲಿ ಎರಡು ಕೋಟಿ ಟನ್‌ನಷ್ಟು ಯೂರಿಯಾ ರೈತರಿಗೆ ಬೇಕಾಗಿದೆ. ಆದರೆ 50% ರಸಗೊಬ್ಬರ ಇದೆ. ರೈತರಿಗೆ 50% ರಸ ಗೊಬ್ಬರದ ಕೊರತೆ ಆಗುವ ಸಾಧ್ಯತೆ ಇದೆ. ಎಫ್ ಐ ಡಿ ಇಲ್ಲದೆ ಬಗರು ಹುಕುಂ, ಗುತ್ತಿಗೆ ಮಾಡುವ ರೈತರ ಜಮೀನು, 10-15% ಪೌತಿ ಖಾತೆ ಆಗಿರುವುದಿಲ್ಲ. ಇವರಿಗೆ ರಸಗೊಬ್ಬರ ಕೊಡುವವರು ಯಾರು?. ರಾಜ್ಯ ಸರ್ಕಾರ ಪರ್ಯಾಯ ಮಾರ್ಗವನ್ನು ಕಂಡುಹಿಡಿದು ರೈತರಿಗೆ ರಸ ಗೊಬ್ಬರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

 

 

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

10 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

10 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

10 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

13 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

13 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

13 hours ago